ರಾಷ್ಟ್ರಮಟ್ಟದ ಛಾಯಾಚಿತ್ರ ಸ್ಪರ್ಧೆ
ಬೆಂಗಳೂರು, ಆ, 6 : ಸರ್ಕಾರದ ಅಭಿವೃದ್ಧಿ ಕಾರ್ಯಗಳು ಹಾಗೂ ಇತರೆ ಸಾಮಾಜಿಕ ವಿಷಯಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ "ಗ್ರಾಮೀಣ ಹೆಣ್ಣುಮಗು" ಎಂಬ ವಿಷಯದ ಕುರಿತು ರಾಷ್ಟ್ರಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಸ್ಪರ್ಧೆಯ ನಿಯಮ ಮತ್ತು ಷರತ್ತುಗಳು ಕೆಳಕಂಡಂತಿವೆ.
ಸ್ಪರ್ಧೆಗೆ ಸ್ವೀಕೃತವಾದ ಚಿತ್ರಗಳನ್ನು ತಾಂತ್ರಿಕ ಪರಿಣತರ ಸಮಿತಿಯು ಬಹುಮಾನಕ್ಕಾಗಿ ಆಯ್ಕೆ ಮಾಡುವುದು. ಛಾಯಾಚಿತ್ರಗಳನ್ನು ಸ್ವೀಕರಿಸಲು ಅಂತಿಮ ದಿನಾಂಕ 30-9-09. ಹೆಚ್ಚಿನ ಮಾಹಿತಿಯನ್ನು ಪಡೆಯಲು ಕೇಂದ್ರ ಕಛೇರಿಯ ಉಪನಿರ್ದೇಶಕರು ದೂರವಾಣಿ 222028050 ಹಾಗೂ ಸಂಬಂಧಪಟ್ಟ ಜಿಲ್ಲಾ ವಾರ್ತಾಧಿಕಾರಿಗಳನ್ನು ಸಂಪರ್ಕಿಸಬಹುದು.
ಬಹುಮಾನ ವಿವರಗಳು, ಪ್ರಥಮ ಬಹುಮಾನ 20 ಸಾವಿರ ರುಪಾಯಿ, ದ್ವಿತೀಯ ಬಹುಮಾನ 15 ಸಾವಿರ ರುಪಾಯಿ, ತೃತೀಯ ಬಹುಮಾನ 10 ಸಾವಿರ ರುಪಾಯಿ, 10 ಸಮಾಧಾನಕರ ಬಹುಮಾನಗಳು ತಲಾ 1 ಸಾವಿರ ರುಪಾಯಿಗಳು.
ಸ್ಪರ್ಧೆಯ ನಿಯಮ ಮತ್ತು ಷರತ್ತುಗಳು
ಸ್ಪರ್ಧೆಗೆ ಪ್ರವೇಶ ಶುಲ್ಕ ಇರುವುದಿಲ್ಲ. ವಾರ್ತಾ ಇಲಾಖೆಯ ಸಿಬ್ಬಂದಿಯನ್ನು ಹೊರತುಪಡಿಸಿ ಇತರೆ ಎಲ್ಲರಿಗೂ ಸ್ಪರ್ಧೆಗೆ ಮುಕ್ತ ಪ್ರವೇಶಾವಕಾಶವಿರುತ್ತದೆ. ಮೌಂಟ್ ಮಾಡಿರದ 16" x 20" ಅಳತೆಯ ಚಿತ್ರವನ್ನು ಸ್ಪರ್ಧೆಗೆ ಕಳುಹಿಸಬೇಕು (ಗರಿಷ್ಠ 4 ಚಿತ್ರಗಳು). ಚಿತ್ರದ ಹಿಂಬದಿಯಲ್ಲಿ ಛಾಯಾಗ್ರಾಹಕರ ಹೆಸರು ಬರೆದಿರಬೇಕು. ಡಿಜಿಟಲ್ ತಂತ್ರಜ್ಞಾನ ಉಪಯೋಗಿಸಿ ಮೂಲ ಛಾಯಾಚಿತ್ರದ ಸ್ವರೂಪವನ್ನು ಬದಲಿಸಿದ ಛಾಯಾಚಿತ್ರಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ. ಛಾಯಾಚಿತ್ರಗಳ ಜೊತೆ ಚಿತ್ರಗ್ರಾಹಕರ ಹೆಸರು, ವಯಸ್ಸು, ವಿಳಾಸ, ರಾಷ್ಟ್ರೀಯತೆ, ಇ-ಮೇಲ್, ಇತ್ಯಾದಿ ವಿವರಗಳನ್ನು ಕಳುಹಿಸಬೇಕು.
ಚಿತ್ರಗಳನ್ನು "ಛಾಯಾಚಿತ್ರ ಸ್ಪರ್ಧೆ" ಎಂದು ಬರೆಯಲ್ಪಟ್ಟ ಲಕೋಟೆಯಲ್ಲಿ ನಿರ್ದೇಶಕರು, ವಾರ್ತಾ ಇಲಾಖೆ, "ವಾರ್ತಾ ಸೌಧ", ನಂ. 17, ಭಗವಾನ್ ಮಹಾವೀರ ರಸ್ತೆ, ಬೆಂಗಳೂರು-560001 ಇವರಿಗೆ ಕಳುಹಿಸಬೇಕು. ಸ್ಪರ್ಧಾ ಚಿತ್ರಗಳನ್ನು ಸ್ವೀಕರಿಸಲು ಅಂತಿಮ ದಿನಾಂಕ 30-09-09. ಸ್ಪರ್ಧಾ ಚಿತ್ರಗಳ ಆಯ್ಕೆಯಲ್ಲಿ ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ. ಆಯ್ಕೆಯಾದ ಚಿತ್ರಗಳನ್ನು ಇಲಾಖೆಯ ಪ್ರಕಟಣೆಗಳಲ್ಲಿ, ಸರ್ಕಾರಿ ಜಾಹೀರಾತುಗಳಲ್ಲಿ, ಪ್ರದರ್ಶನಗಳಲ್ಲಿ ಪ್ರದರ್ಶಿಸಲು ವಾರ್ತಾ ಇಲಾಖೆಯು ಹಕ್ಕುಗಳನ್ನು ಹೊಂದಿರುತ್ತದೆ.
(ದಟ್ಸ್ ಕನ್ನಡ ವಾರ್ತೆ)
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications