ಹೈಕೋರ್ಟ್ ಮೆಟ್ಟಲೇರಿದ ಪ್ರತಿಮೆ ಅನಾವರಣ

ಸರಕಾರ ಬಿಬಿಎಂಪಿ ಅಥವಾ ಯಾವುದೇ ಇಲಾಖೆಯಿಂದ ಅನುಮತಿ ಪಡೆಯದೇ ಅಕ್ರಮವಾಗಿ ಪ್ರತಿಮೆ ಅನಾವರಣಕ್ಕೆ ಮುಂದಾಗಿದೆ ಇದಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಬೇಕೆಂದು ವಾಟಾಳ್ ನಾಗರಾಜ್ ಅರ್ಜಿ ಸಲ್ಲಿಸಿದ್ದಾರೆ. ಶಾಸಕರ ಭವನದಲ್ಲಿ ಕನ್ನಡಪರ ಸಂಘಟನೆಗಳ ಜೊತೆ ಮಾತುಕತೆ ನಡೆಸಿದ ವಾಟಾಳ್, ತಿರುವಳ್ಳವರ್ ಪ್ರತಿಮೆ ಅನಾವರಣ ಧರ್ಮ ಯುದ್ದವಾಗಿದೆ. ಯಡಿಯೂರಪ್ಪ ತಮಿಳರ ನಾಯಕ ನಾನು ಕನ್ನಡಿಗರ ನಾಯಕ ಯಾರು ಗೆಲ್ಲುತ್ತಾರೋ ನೋಡೋಣ ಎಂದು ಸರಕಾರಕ್ಕೆ ಸವಾಲೆಸೆದಿದ್ದಾರೆ.
ಈ ವಿಷಯದಲ್ಲಿ ನಮ್ಮ ಸಾಹಿತಿಗಳು ಬೇಜಬ್ದಾರಿಯಿಂದ ವರ್ತಿಸಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ಭಜನಾ ಮಂದಿರವಾಗಿದೆ. ಪ್ರತಿಮೆ ಅನಾವರಣ ವಿರೋಧಿಸಿ ಆಗಸ್ಟ್ 7ರಂದು ನಗರದ ಕೆಂಪೇಗೌಡ ಪ್ರತಿಮೆಯಿಂದ ರಾಜಭವನದವರೆಗೆ ಭಾರಿ ಪ್ರತಿಭಟನೆ ನಡೆಸಲಾಗುವುದು ಎಂದು ವಾಟಾಳ್ ಗುಡುಗಿದ್ದಾರೆ.
ಅತ್ತ ಸಭೆ ನಡೆಯುತ್ತಿದ್ದರೆ ಇತ್ತ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಗೌಡ ಬಣ) ಭಾರಿ ಮೆರವಣಿಗೆ ಮೂಲಕ ರಾಜ್ಯ ಚುನಾವಣ ಆಯೋಗಕ್ಕೆ ಮನವಿ ಸಲ್ಲಿಸಿದೆ. ಉಪ ಚುನಾವಣೆ ಇರುವುದರಿಂದ ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ. ಗೋವಿಂದರಾಜನಗರದಲ್ಲಿ ಹೆಚ್ಚಿನ ತಮಿಳರು ಇದ್ದಾರೆ, ಪ್ರತಿಮೆ ಅನಾವರಣಕ್ಕೆ ಅನುಮತಿ ನೀಡಬಾರದು ಎಂದು ಮನವಿ ಸಲ್ಲಿಸಿದೆ. ಆಗಸ್ಟ್ 9ರಂದು ಕರವೇಯ 25ಸಾವಿರ ಕಾರ್ಯಕರ್ತರು ಮೈಸೂರು ಬ್ಯಾಂಕ್ ವೃತ್ತದಿಂದ ಹಲಸೂರಿಗೆ ತೆರಳಿ ಪ್ರತಿಮೆ ಅನಾವರಣ ತಡೆಯಲಿದ್ದಾರೆಂದು ನಾರಾಯಣಗೌಡ ಹೇಳಿಕೆ ನೀಡಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications