ಬಂಡಾಯ : ರೇಣುಕಾಚಾರ್ಯ ರಹಸ್ಯ ಸಭೆ

ದಾವಣಗೆರೆ, ಶಿವಮೊಗ್ಗ ಮತ್ತು ಉತ್ತರ ಕರ್ನಾಟಕದ ಅತೃಪ್ತ ಶಾಸಕರು ರೇಣುಕಾಚಾರ್ಯ ಬೆಂಬಲಕ್ಕೆ ನಿಂತಿದ್ದು, ಶೋಕಾಸ್ ನೋಟೀಸ್ ಗೆ ಉತ್ತರಿಸಬಾರದೆಂದು ರೇಣುಕಾಚಾರ್ಯಗೆ ಒತ್ತಡ ಹಾಕಿದ್ದಾರೆಂದು ತಿಳಿದು ಬಂದಿದೆ. ತನ್ನ ಬೆಂಬಲಕ್ಕೆ ಧಾವಿಸುತ್ತಿರುವ ಶಾಸಕರನ್ನು ಒಗ್ಗೂಡಿಸುವ ಕಾರ್ಯದಲ್ಲಿ ರೇಣುಕಾ ನಿರತರಾಗಿದ್ದಾರೆ.
ಬುಧವಾರ (ಆ 5) ನಗರದ ಖಾಸಗಿ ಹೋಟೆಲ್ ನಲ್ಲಿ ರಹಸ್ಯ ಸಭೆ ನಡೆಸಿ, ಪಕ್ಷದಲ್ಲಿನ ನಿಷ್ಟಾವಂತವರನ್ನು ಕಡೆಗಣಿಸಿ ಕೆಲವರಿಗೆ ಮಾತ್ರ ಆದ್ಯತೆ ನೀಡುತ್ತಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಯಿತು. ಇದನ್ನು ತಡೆಯಲು ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಹೇಳಲಾಗಿದೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications