ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಪಚುನಾವಣೆ ಪ್ರಚಾರ ಆಖಾಡಕ್ಕೆ ಕೃಷ್ಣ

By Staff
|
Google Oneindia Kannada News

SM Krishna
ಬೆಂಗಳೂರು, ಆ. 6 : ಉಪಚುನಾವಣೆ ಪ್ರಚಾರ ಆಖಾಡಕ್ಕೆ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಆಗಸ್ಟ್ 8 ರಂದು ನಗರಕ್ಕೆ ಆಗಮಿಸಲಿದ್ದಾರೆ. ಪಕ್ಷದ ಚುನಾವಣಾ ಪ್ರಚಾರ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆಂದು ಪಕ್ಷದ ಮೂಲಗಳು ತಿಳಿಸಿವೆ.

ಎಲ್ಲಾ ಐದು ಕ್ಷೇತ್ರಗಳಲ್ಲಿ ಸಂಚರಿಸಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಕೃಷ್ಣ ಪ್ರಚಾರಕ್ಕೆ ಇಳಿಯುತ್ತಿರುವುದರಿಂದ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಉಂಟಾಗಿದೆ. ಹೊಸ ಹುರುಪಿನಿಂದ ಕಾರ್ಯಕರ್ತರು ಚುನಾವಣೆ ಎದುರಿಸಲು ಸಜ್ಜಾಗಿದ್ದಾರೆ.

ಬಿಜೆಪಿ ಪಕ್ಷದ ಬಿಕ್ಕಟ್ಟು ಮತ್ತು ಭಿನ್ನಾಭಿಪ್ರಾಯ ದಿನೇದಿನೇ ಹೆಚ್ಚುತ್ತಿರುವುದು ಪಕ್ಷಕ್ಕೆ ವರವಾಗಿ ಪರಿಣಮಿಸಲಿದೆ. ಪ್ರಭಾವಿ ನಾಯಕ, ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಆಯಾಮ ಸೃಸ್ಟಿಸಿ ದೇಶದ ನಂಬರ್ 1 ಮುಖ್ಯಮಂತ್ರಿ ಎಂಬ ಖ್ಯಾತಿಗೆ ಪಾತ್ರವಾಗಿರುವ ಎಸ್ ಎಂ ಕೃಷ್ಣ ಪ್ರಚಾರಕ್ಕೆ ಆಗಮಿಸುತ್ತಿರುವುದು ಹೊಸ ದಿಕ್ಸೂಚಿಗೆ ಕಾರಣವಾಗಲಿದೆ ಎಂದು ಪಕ್ಷದ ಸದಸ್ಯರೊಬ್ಬರು ಹೇಳಿಕೆ ನೀಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X