ನಗರದಲ್ಲಿ ಭಾರೀ ಭದ್ರತೆ : ಶಂಕರ ಬಿದರಿ

ಬೆಂಗಳೂರು, ಆ. 7 : ತಿರುವಳ್ಳವರ್ ಪ್ರತಿಮೆ ಅನಾವರಣ ಸಂಬಂಧ ಇಂದಿನಿಂದ (ಆ 7) ಭಾನುವಾರದ (ಆ 9) ವರೆಗೆ ನಗರದಾದ್ಯಂತ ಪೋಲಿಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ. ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ನಗರ ಪೋಲಿಸ್ ಆಯುಕ್ತ ಶಂಕರ್ ಬಿದರಿ ಕನ್ನಡಪರ ಸಂಘಟನೆಗಳು ಅನುಮತಿ ಪಡೆದ ಸ್ಥಳ ಮತ್ತು ದಾರಿಯಲ್ಲೇ ಪ್ರತಿಭಟನೆ ಅಥವಾ ಮೆರವಣಿಗೆ ನಡೆಸಬೇಕು. ಇಲ್ಲವಾದಲ್ಲಿ ಸೆಕ್ಷನ್ 103ರ ಅಡಿಯಲ್ಲಿ ಬಂಧಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಕೆಲವು ಸಂಘಟನೆಗಳು ಆಗಸ್ಟ್ 9ರಂದು ಹಲಸೂರಿಗೆ ಭಾರಿ ಮೆರವಣಿಗೆಯಲ್ಲಿ ಬಂದರೆ ಕೆಲವು ಸಂಘಟನೆಗಳು ಮುನ್ನಾ ದಿನದಂದೇ ಪ್ರತಿಮೆ ಅನಾವರಣ ಪ್ರದೇಶದಲ್ಲಿ ಪ್ರತಿಭಟನೆ ನಡೆಸಲಿದೆ. ಈ ಸಮಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕದಡದಂತೆ ನೋಡಿಕೊಳ್ಳಲು ಹಿರಿಯ ಪೋಲಿಸ್ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಲಾಗಿದೆ ಎಂದು ಬಿದರಿ ಹೇಳಿಕೆ ನೀಡಿದ್ದಾರೆ.

ಶುಕ್ರವಾರದಂದು (ಆ 7) ಕನ್ನಡ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಮತ್ತು ಕನ್ನಡ ಚಳುವಳಿ ವಾಟಾಳ್ ಪಕ್ಷದ ಕಾರ್ಯಕರ್ತರು ಕೆಂಪೇಗೌಡ ಪ್ರತಿಮೆಯಿಂದ ರಾಜಭವನದ ವರೆಗೆ ಮೆರವಣಿಗೆ ನಡೆಸಲಿದ್ದಾರೆ. ಇನ್ನೊಂದು ಕರವೇ ಬಣ (ನಾರಾಯಣ ಗೌಡ) ಜೆ ಸಿ ರಸ್ತೆಯಲ್ಲಿರುವ ಕನ್ನಡ ಭವನದ ಮುಂದೆ ಪ್ರತಿಭಟನೆ ನಡೆಸಲಿದೆ. ಈ ಸಮಯದಲ್ಲಿ ಶಾಂತಿ ಸುವ್ಯವಸ್ಥೆಗೆ ತೊಂದರೆ ಬರದಂತೆ ಎಚ್ಚರ ವಹಿಸಲಾಗಿದೆ ಎಂದು ಬಿದರಿ ಹೇಳಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+