ಗ್ರಾಮೀಣ ಹೊರಗುತ್ತಿಗೆ ಸೇವಾ ಕೇಂದ್ರಕ್ಕೆ ಚಾಲನೆ
ಬೆಂಗಳೂರು, ಆ. 7 : ಸರ್ಕಾರದ ನಂತರ ಮಾಹಿತಿ ತಂತ್ರಜ್ಞಾನ ಕ್ಷೇತ್ರವು ಅತೀ ಹೆಚ್ಚಿನ ಉದ್ಯೋಗಗಳನ್ನು ನೀಡುವ ಕ್ಷೇತ್ರವಾಗಿದೆ. ಕರ್ನಾಟಕ ರಾಜ್ಯದಲ್ಲಿ ಐಟಿ ಹಾಗೂ ಬಿಪಿಒ ಕ್ಷೇತ್ರಗಳಲ್ಲಿ 5 ಲಕ್ಷಗಳಿಗಿಂತ ಹೆಚ್ಚು ಜನ ಉದ್ಯೋಗ ಪಡೆದಿದ್ದಾರೆ. ಇದರಲ್ಲಿ ಬಹುತೇಕ ಹುದ್ದೆಗಳು ಬೆಂಗಳೂರಿನಲ್ಲಿವೆ. ಬಿಪಿಒ, ಐಟಿಇಎಸ್ ಕ್ಷೇತ್ರವು 2 ಲಕ್ಷಕ್ಕಿಂತ ಹೆಚ್ಚಿನ ಜನರಿಗೆ ನೇರ ಉದ್ಯೋಗಗಳನ್ನು ಒದಗಿಸಿದೆ.
ಕೈಗಾರಿಕೆಗಳನ್ನು ರಾಜ್ಯದ ಎಲ್ಲಾ ಭಾಗಗಳಲ್ಲಿ ಸ್ಥಾಪಿಸಲು ಸರ್ಕಾರವು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಕೈಗಾರಿಕೆಗಳು ಎಲ್ಲಾ ಕಡೆಗಳಲ್ಲಿ ಸ್ಥಾಪನೆಯಾದಾಗ ಸ್ಥಳೀಯ ಜನರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಲು ಸಾಧ್ಯವಾಗುತ್ತದೆ. ಈ ಅಂಶವನ್ನು ಗಮನದಲ್ಲಿರಿಸಿ ರಾಜ್ಯ ಸರ್ಕಾರವು ಒಂದು ಲಕ್ಷಕ್ಕಿಂತಲೂ ಕಡಿಮೆ ಜನಸಂಖ್ಯೆ ಇರುವ ಗ್ರಾಮೀಣ ಪ್ರದೇಶಗಳಲ್ಲಿ ಹೊರಗುತ್ತಿಗೆ ಆಧಾರಿತ ಸೇವೆಗಳ ಕೇಂದ್ರಗಳನ್ನು ಸ್ಥಾಪಿಸಲು ಯೋಜನೆಯನ್ನು ರೂಪಿಸಿದೆ. ಇಂತಹ ಸ್ಥಳಗಳಲ್ಲಿ ಉದ್ದಿಮೆಗಳನ್ನು ಸ್ಥಾಪಿಸಲು ಉದ್ದಿಮೆದಾರರಿಗೆ ಈ ಕೆಳಕಂಡಂತೆ ಆರ್ಥಿಕ ನೆರವನ್ನು ನೀಡಲಾಗುವುದು:
ಅನಾವರ್ತ ಆರ್ಥಿಕ ಬೆಂಬಲ
ಪ್ರತಿ 100 ಆಸನದ ಬಿಪಿಒ ಘಟಕಗಳಿಗೆ 20 ಲಕ್ಷ ರುಪಾಯಿವರೆಗೆ ಬಂಡವಾಳ ಹೂಡಿಕೆ ಸಹಾಯಧನ ಮಾನವ ಶಕ್ತಿ ತರಬೇತಿಗಾಗಿ ಪ್ರತಿ ಉದ್ಯೋಗಿಗೆ 10 ಸಾವಿರ ರುಪಾಯಿ ಆರ್ಥಿಕ ಬೆಂಬಲ.
ಆವರ್ತ ಆರ್ಥಿಕ ಬೆಂಬಲ
ಕಟ್ಟಡ ಬಾಡಿಗೆಗಳು ಮತ್ತು ಅಂತರ್ಜಾಲ ಜೋಡಣೆಯ ವೆಚ್ಚವನ್ನು ಭರಿಸಲು ಪ್ರತಿ ಉದ್ಯೋಗಿಗೆ ಸಹಾಯಧನವಾಗಿ 5 ಸಾವಿರ ರುಪಾಯಿ ಆರ್ಥಿಕ ಬೆಂಬಲ. ಈ ಯೋಜನೆಯಡಿ ಕನಿಷ್ಠ 100 ಆಸನಗಳ ಕೇಂದ್ರವನ್ನು ಸ್ಥಾಪಿಸಲು ಅವಕಾಶವಿದ್ದು, ನಂತರ 100ರ ಅಂಶಗಳಂತೆ ಹೆಚ್ಚಿನ ಆಸನಗಳಿಗೆ ಮೇಲಿನಂತೆ ಆರ್ಥಿಕ ಬೆಂಬಲವನ್ನು ನೀಡಲು ಯೋಜನೆಯಲ್ಲಿ ಕಲ್ಪಿಸಲಾಗಿದೆ.
ಯೋಜನೆಯಡಿ ಉದ್ದಿಮೆದಾರರನ್ನು ಗುರುತಿಸಲು ಬಿಪಿಒ ಕ್ಷೇತ್ರದ ಗಣ್ಯರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿದ್ದು, ಪಾರದರ್ಶಕ ವಿಧಾನದಲ್ಲಿ ಸಂದರ್ಶನದ ಮೂಲಕ ಅರ್ಹ ಉದ್ದಿಮೆದಾರರಿಗೆ ಕೇಂದ್ರಗಳನ್ನು ಸ್ಥಾಪಿಸಲು ಅವಕಾಶ ನೀಡಲಾಗುತ್ತದೆ.
ಶ್ರೀರಂಗಪಟ್ಟಣ ತಾಲೂಕಿನ ಬಾಬುರಾಯನಕೊಪ್ಪಲು ಗ್ರಾಮದಲ್ಲಿ ರಾಜ್ಯದ ಪ್ರಥಮ ಗ್ರಾಮೀಣ ಹೊರಗುತ್ತಿಗೆ ಸೇವೆಗಳ ಕೇಂದ್ರವನ್ನು ಪ್ರಾರಂಭಿಸುತ್ತಿದ್ದು, ಉದ್ಘಾಟನಾ ಕಾರ್ಯಕ್ರಮವನ್ನು ದಿನಾಂಕ. 17-08-09 ರಂದು ಹಮ್ಮಿಕೊಳ್ಳಲಾಗಿದೆ.
ತಾಲೂಕು ಹಾಗೂ ಹೋಬಳಿ ಕೇಂದ್ರಗಳಲ್ಲಿ ಉನ್ನತ ಮಟ್ಟದ ತಂತ್ರಾಂಶ ಜ್ಞಾನವುಳ್ಳ ಪರಿಣಿತರು ಇಲ್ದದಿದ್ದರೂ ಇರುವ ವಿದ್ಯಾವಂತರಿಗೆ ಉದ್ಯೋಗಾವಕಾಶಗಳನ್ನು ನೀಡಬಹುದೆಂಬ ಅಂಶವನ್ನು ಮನದಲ್ಲಿರಿಸಿ ಈ ಯೋಜನೆಯನ್ನು ಸರ್ಕಾರವು ರೂಪಿಸಿದೆ. ಕಂಪ್ಯೂಟರ್ಗಳ ಕನಿಷ್ಠ ಜ್ಞಾನ ಹೊಂದಿರುವರು ಸಹ ಈ ಯೋಜನೆಯಡಿ ಉದ್ಯೋಗವನ್ನು ಪಡೆಯಬಹುದಾಗಿದೆ. ಮುಂದಿನೆ ಐದು ವರ್ಷಗಳಲ್ಲಿ ಸುಮಾರು ಒಂದು ಲಕ್ಷ ಹುದ್ದೆಗಳನ್ನು ಈ ಯೋಜನೆಯಡಿ ಸೃಷ್ಟಿಸುವುದು ಸರ್ಕಾರದ ಗುರಿಯಾಗಿದೆ.
(ದಟ್ಸ್ ಕನ್ನಡ ವಾರ್ತೆ)
-
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ












Click it and Unblock the Notifications