ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಕರುಣಾನಿಧಿ

By Staff
|
Google Oneindia Kannada News

Karunanidhi to inaugurate thiruvalluvar statue
ಕವಿ ತಿರುವಳ್ಳುವರ್ ಪ್ರತಿಮೆ ಅನಾವರಣ ಸಮಾರಂಭವು ಆಗಸ್ಟ್ 9 ರಂದು ಬೆಳಿಗ್ಗೆ 11 ಗಂಟೆಗೆ ಹಲಸೂರು ಕೆರೆ ಹತ್ತಿರ ಓಡುಕಟ್ಟುಸ್ವಾಮಿ ಮಠದ ಎದುರು ಗಂಗಾಧರ ಚೆಟ್ಟಿ ರಸ್ತೆ, ಇಲ್ಲಿ ಜರುಗಲಿದ್ದು ತಮಿಳುನಾಡು ಮುಖ್ಯಮುಖ್ಯಮಂತ್ರಿ ಡಾ. ಎಂ. ಕರುಣಾನಿಧಿ ಅವರು ಅನಾವರಣ ಮಾಡಲಿದ್ದು ಕರ್ನಾಟಕ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಕನ್ನಡದ ಕವಿ ಶ್ರೇಷ್ಠ ಸರ್ವಜ್ಞ ಮೂರ್ತಿ ಅನಾವರಣ ಸಮಾರಂಭ ಆಗಸ್ಟ್ 13 ರಂದು ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ನಡೆಯಲಿದೆ. ಕರ್ನಾಟಕ ಹಾಗೂ ತಮಿಳುನಾಡು ಮುಖ್ಯಮಂತ್ರಿಗಳೂ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.

ತಿರುವಳ್ಳುವರ್ ಪ್ರತಿಮೆ ಅನಾವರಣದ ಆಹ್ವಾನ ಪತ್ರಿಕೆಯನ್ನು ತಮಿಳಿನಲ್ಲಿ ಮುದ್ರಿಸಲಾಗಿದೆ ಎಂಬ ಕನ್ನಡ ಪರ ಸಂಘಟನೆಗಳ ಆರೋಪವನ್ನು ಕನ್ನಡ ಅಭಿವೃದ್ದ್ಧಿ ಪ್ರಾಧಿಕಾರ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಳ್ಳಿಹಾಕಿದ್ದಾರೆ. ಸಮಾರಂಭದ ಆಹ್ವಾನ ಪತ್ರಿಕೆಯನ್ನು ಕನ್ನಡ ಮತ್ತು ತಮಿಳು ಎರಡು ಭಾಷೆಗಳಲ್ಲಿ ಮುದ್ರಿಸಲಾಗಿದೆ ಎಂದು ಅವರು ಸ್ಪಷ್ಟೀಕರಣ ನೀಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X