ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಕರುಣಾನಿಧಿ

ಕನ್ನಡದ ಕವಿ ಶ್ರೇಷ್ಠ ಸರ್ವಜ್ಞ ಮೂರ್ತಿ ಅನಾವರಣ ಸಮಾರಂಭ ಆಗಸ್ಟ್ 13 ರಂದು ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ನಡೆಯಲಿದೆ. ಕರ್ನಾಟಕ ಹಾಗೂ ತಮಿಳುನಾಡು ಮುಖ್ಯಮಂತ್ರಿಗಳೂ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.
ತಿರುವಳ್ಳುವರ್ ಪ್ರತಿಮೆ ಅನಾವರಣದ ಆಹ್ವಾನ ಪತ್ರಿಕೆಯನ್ನು ತಮಿಳಿನಲ್ಲಿ ಮುದ್ರಿಸಲಾಗಿದೆ ಎಂಬ ಕನ್ನಡ ಪರ ಸಂಘಟನೆಗಳ ಆರೋಪವನ್ನು ಕನ್ನಡ ಅಭಿವೃದ್ದ್ಧಿ ಪ್ರಾಧಿಕಾರ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಳ್ಳಿಹಾಕಿದ್ದಾರೆ. ಸಮಾರಂಭದ ಆಹ್ವಾನ ಪತ್ರಿಕೆಯನ್ನು ಕನ್ನಡ ಮತ್ತು ತಮಿಳು ಎರಡು ಭಾಷೆಗಳಲ್ಲಿ ಮುದ್ರಿಸಲಾಗಿದೆ ಎಂದು ಅವರು ಸ್ಪಷ್ಟೀಕರಣ ನೀಡಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications