ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಕ್ಷಣಗಣನೆ

ಪ್ರತಿಮೆ ಅನಾವರಣಕ್ಕೆ ತಮಿಳುನಾಡಿನ ಮುಖ್ಯಮಂತ್ರಿ ಎಂ. ಕರುಣಾನಿಧಿ ಆಗಮಿಸುತ್ತಿದ್ದು, ತಮಿಳಿನ ಸಚಿವರು, ಸಾಹಿತಿಗಳು, ಹೋರಾಟಗಾರರು ಕೂಡ ಆಗಮಿಸುತ್ತಿದ್ದಾರೆ. ಇದಕ್ಕಾಗಿ ಬೃಹತ್ ವೇದಿಕೆಯನ್ನು ನಿರ್ಮಿಸಲಾಗಿದ್ದು, ಕರುಣಾನಿಧಿ ಗುಂಡಿಯೊತ್ತುವ ಮೂಲಕ ಪ್ರತಿಮೆ ಅನಾವರಣ ಮಾಡಲಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ಸಮಾರಂಭದ ಅಧ್ಯಕ್ಷತೆವಹಿಸಲಿದ್ದಾರೆ.
ಯಡಿಯೂರಪ್ಪನವರು ಶನಿವಾರ ರಾತ್ರಿಯೇ ಖುದ್ದಾಗಿ ಹಲಸೂರಿಗೆ ತೆರಳಿ ಪೂರ್ವಸಿದ್ಧತೆಯ ವಿವರ ಪಡೆದರು. ಭದ್ರತೆ, ಆಸನ ವ್ಯವಸ್ಥೆ ಕುರಿತಂತೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.
ನಗರದಲ್ಲಿರುವ ಎಲ್ಲ ತಮಿಳ ಭಾಷಿಗರು ಮತ್ತು ನೆರೆಯ ರಾಜ್ಯದಿಂದಲೂ ಅನೇಕ ತಮಿಳು ಭಾಷಿಗರು ಕಾರ್ಯಕ್ರಮಕ್ಕೆ ಬರುವ ನಿರೀಕ್ಷೆಯಿದೆ. ಇದಕ್ಕಾಗಿ 30ರಿಂದ 40 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಹಲಸೂರು ಕೆರೆಯ ಬಳಿ ಹಬ್ಬದ ವಾತಾವರಣ ಮನೆಮಾಡಿದೆ. ವಾಹನ ನಿಲುಗಡೆಗೆ ಕೂಡ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ಪ್ರತಿಮೆ ಸುತ್ತಲಿನ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ. ಕನ್ನಡ ಹೋರಾಟಗಾರರು ಅನಾವರಣಕ್ಕೆ ತಡೆಯೊಡ್ಡದಂತೆ ಭಾರೀ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಇಂದು ಬಂದ್ ಕರೆ ನೀಡಿದ್ದರಿಂದ ನಗರದ ಎಲ್ಲೆಕಡೆಗಳಲ್ಲಿ ಕೂಡ ಪೊಲೀಸರು ಹದ್ದಿನ ಕಣ್ಣುಗಳಿಂದ ಕಾವಲು ಕಾಯುತ್ತಿದ್ದಾರೆ.
ಆಗಸ್ಟ್ 13ರಂದು ಚೆನ್ನೈನಲ್ಲಿ ಕನ್ನಡದ ವಚನಕಾರ ಸರ್ವಜ್ಞನ ಪ್ರತಿಮೆ ಅನಾವರಣಗೊಳ್ಳಲಿದ್ದು, ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯದ ಸಚಿವರು ಮತ್ತು ಸಾಹಿತಿಗಳು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications