ತಿರುವಳ್ಳುವರ್ ಪ್ರತಿಮೆ ಆನಾವರಣಕ್ಕೆ ಜನಸಾಗರ

ಕಾರ್ಯಕ್ರಮ ಕುವೆಂಪು ಅವರ ಜಯಭಾರತ ಜನನಿಯ ತನುಜಾತೆ ಹಾಡಿನೊಂದಿಗೆ ಆರಂಭವಾಯಿತು. ಸಿ. ಅಶ್ವತ್ಥ ಮತ್ತು ತಂಡ ಗೀತೆಯನ್ನು ಹಾಡಿತು. ಎಲ್ಲ ಗಣ್ಯರು ಹಾಡಿಗೆ ಎದ್ದು ನಿಲ್ಲುವ ಮೂಲಕ ಗೌರವ ಸೂಚಿಸಿದರು.
ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಶೋಭಾ ಕರಂದ್ಲಾಜೆ, ವೆಂಕಯ್ಯ ನಾಯ್ಡು, ಸಿದ್ದರಾಮಯ್ಯ, ರೋಶನ್ ಬೇಗ್, ಆರ್. ಅಶೋಕ್, ಪಿಸಿ ಮೋಹನ್, ಅನಂತಕುಮಾರ್ ಮೊದಲಾದವರು ಸ್ಥಳಕ್ಕೆ ಆಗಮಿಸಿದ್ದಾರೆ. ಸಾಹಿತಿಗಳಾದ ಎಂ ಚಿದಾನಂದ ಮೂರ್ತಿ, ಜಿಎಸ್ ಶಿವರುದ್ರಪ್ಪ, ಸಿದ್ದಲಿಂಗಯ್ಯ ಮೊದಲಾದವರು ಸರಿಯಾದ ಸಮಯಕ್ಕೆ ಆಗಮಿಸಿದರು. ಸಮಾರಂಭಕ್ಕೆ ಎರಡೂ ರಾಜ್ಯಗಳ ಗಣ್ಯರು, ಸಾಹಿತಿಗಳು, ರಾಜಕಾರಣಿಗಳು ಆಗಮಿಸಿದ್ದಾರೆ.
ನೀಲಕಂಠನ್ ವೃತ್ತದ ಸ್ಟೇಡಿಯಂನಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗಿದ್ದು, ವೇದಿಕೆಯ ಹಿಂಬದಿಯಲ್ಲಿ ಕನ್ನಡ ಮತ್ತು ತಮಿಳಿನಲ್ಲಿ ಆಹ್ವಾನ ಪತ್ರಿಕೆಯನ್ನು ಮುದ್ರಿಸಲಾಗಿದೆ. ಜನರಿಗಾಗಿ ಬೃಹತ್ ಶಾಮಿಯಾನದಡಿ ಸುಮಾರು 40 ಸಾವಿರ ಕುರ್ಚಿಗಳನ್ನು ಹಾಕಲಾಗಿದೆ. ಎರಡೂ ರಾಜ್ಯಗಳ ಜನಸಾಗರವೇ ಅಲ್ಲಿ ನೆರೆದಿದೆ.
ಕರವೇ ಕಾರ್ಯಕರ್ತರ ಬಂಧನ : ವಾಟಾಳ್ ನಾಗರಾಜ್ ಮತ್ತು ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರು ಬಂದ್ ಗೆ ಕರೆ ನೀಡಿತ್ತಾದರೂ ಪ್ರತಿಕ್ರಿಯೆ ತುಂಬ ನೀರಸವಾಗಿದೆ. ನಗರದ ಎಲ್ಲೆಡೆ ಜನಜೀವನ ಸಾಮಾನ್ಯ ಸ್ಥಿತಿಯಲ್ಲಿ ಸಾಗುತ್ತಿದೆ. ಈ ನಡುವೆ, ಮಲ್ಲೇಶ್ವರಂನ ಮೈದಾನದಲ್ಲಿ ಸೇರಿದ್ದ 50 ಕರವೇ ಕಾರ್ಯಕರ್ತರನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ರಾಜ್ಯ ಸರ್ಕಾರ ಮತ್ತು ಪ್ರತಿಮೆ ಅನಾವರಣದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದ ಕಾರ್ಯಕರ್ತರನ್ನು ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡರು.
(ದಟ್ಸ್ ಕನ್ನಡ ವಾರ್ತೆ)
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications