ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಂದಿಜ್ವರ ಹತೋಟಿಗೆ ಯುಪಿಎ ಏನ್ಮಾಡ್ತಿದೆ?

By Staff
|
Google Oneindia Kannada News

Gulama nabi azad
ನವದೆಹಲಿ, ಆ.10: ದೇಶದ ಎಲ್ಲೆಡೆ ಹಂದಿಜ್ವರ ವ್ಯಾಪಕವಾಗಿ ಹಬ್ಬಿರುವ ಹಿನ್ನೆಲೆಯಲ್ಲಿ, ಯುಪಿಎ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲು ಕೊನೆಗೂ ಮನಸ್ಸು ಮಾಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಗುಲಾಂನಬಿ ಅಜಾದ್ ಅವರು ಇಂದು ಕೇಂದ್ರದ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಚಿವ ಸಂಪುಟ ಕಾರ್ಯದರ್ಶಿ ಕೆಎಂ ಚಂದ್ರಶೇಖರ್ ಅವರೊಡನೆ ಸಮಾಲೋಚನೆ ನಡೆಸಿದರು. ದೇಶದಲ್ಲಿ ಶೇ. 33 ರಷ್ಟು ಜನರಿಗೆ ಎಚ್ 1 ಎನ್ 1 ಸೋಂಕು ತಗುಲುವ ಸಾಧ್ಯತೆಯಿದೆ ಎಂದು ಗುಲಾಮ್ ನಬಿ ಅಜಾದ್ ಹೇಳಿದ್ದಾರೆ.

ಇಂದು ನಡೆದ ಸಭೆಯಲ್ಲಿ ಹಂದಿಜ್ವರ ಹರಡದಂತೆ ತಡೆಗಟ್ಟಲು ಬೇಕಾದ ಅಗತ್ಯ ಮುನ್ಸೂಚನೆ ಹಾಗೂ ಔಷಧ ಲಭ್ಯತೆಯ ಬಗ್ಗೆ ಚರ್ಚಿಸಲಾಯಿತು ಎಂದು ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ನರೇಶ್ ದಯಾಳ್ ಹೇಳಿದರು.ಇದುವರೆವಿಗೂ 6 ಜನ ಎಚ್ 1ಎನ್ 1 ಸೋಂಕಿನಿಂದ ಬಳಲುತ್ತಿದ್ದ 6 ಜನ ಸಾವನ್ನಪ್ಪಿದ್ದಾರೆ. ರೋಗದ ಲಕ್ಷಣ ಹಾಗೂ ಸಾರ್ವಜನಿಕ ನೀಡಬೇಕಾದ ಮಾಹಿತಿ ಕುರಿತು ಚರ್ಚಿಸುವಂತೆ ಪ್ರಧಾನಿ ಮನಮೋಹನ್ ಸಿಂಗ್ ಅವರು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವರು ಹಾಗೂ ಹಿರಿಯ ಅಧಿಕಾರಿಗಳು ಸಭೆ ನಡೆಸಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X