ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶ್ರೀರಾಮುಲು ಮೇಲೆ ಸದಾನಂದಗೌಡ ಕಿಡಿ

By Staff
|
Google Oneindia Kannada News

Sadananda Gowda
ಬೆಂಗಳೂರು, ಆ.10: ಆರೋಗ್ಯ ಸಚಿವ ಶ್ರೀರಾಮುಲು ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಶ ಸದಾನಂದಗೌಡ ತೀವ್ರವಾಗಿ ಕಿಡಿಕಾರಿದ್ದಾರೆ.ಹಂದಿಜ್ವರದ ಆತಂಕದ ಸಮಯದಲ್ಲಿ ಸಚಿವರ ನಿರ್ಲಕ್ಷ್ಯಕಾರ್ಯವೈಖರಿಯನ್ನು ಅವರು ಕಟುವಾಗಿ ಟೀಕಿಸಿದ್ದಾರೆ. ಈ ಮಾರಣಾಂತಿಕ ರೋಗ ಎಚ್1ಎನ್1 ವ್ಯಾಪಿಸಿದ್ದರೂ ಶ್ರೀರಾಮುಲು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಮತ್ತು ಅವರ ಕಾರ್ಯವೈಖರಿ ನಮಗೆ ತೃಪ್ತಿ ತಂದಿಲ್ಲ ಎಂದು ಗುಡುಗಿದ್ದಾರೆ.

ಸಚಿವರು ಈ ಮಾರಣಾಂತಿಕ ರೋಗ ಹರಡುತ್ತಿರುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ಸ್ಥೈರ್ಯ ತುಂಬಬೇಕು. ಅದನ್ನು ಬಿಟ್ಟು ಉದಾಸೀನ ಧೋರಣೆ ತೋರಿರುವ ಅವರ ಕಾರ್ಯವೈಖರಿ ನಮಗೆ ತೃಪ್ತಿ ತಂದಿಲ್ಲ ಎಂದು ಸದಾನಂದಗೌಡ ಸಿಟ್ಟಾಗಿದ್ದಾರೆ.

ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಕೂಡಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಹಂದಿಜ್ವರದ ಆತಂಕ ಹೆಚ್ಚಾಗಿದ್ದರೂ ಆರೋಗ್ಯ ಸಚಿವರು ನಾಪತ್ತೆಯಾಗಿದ್ದಾರೆ. ಅವರು ಎಲ್ಲಿದ್ದಾರೆ, ಇಲಾಖೆ ಬಗ್ಗೆ ಯಾವ ಕ್ರಮ ಕೈಗೊಂಡಿದ್ದಾರೆ ಎಂಬುದೇ ತಿಳಿಯುತ್ತಿಲ್ಲ ಎಂದು ಸದಾನಂದಗೌಡ ವಿಷಾದ ವ್ಯಕ್ತಪಡಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X