ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಶೀಘ್ರ ಬಿಜೆಪಿ ಚಲೇಜಾವ್ ಚಳವಳಿ: ದೇಶಪಾಂಡೆ
ಭಾನುವಾರದಂದು (ಆ. 9) ಕ್ವಿಟ್ ಇಂಡಿಯಾ ಚಳುವಳಿ ಸ್ಮರಣಾರ್ಥ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ದೇಶಪಾಂಡೆ, ತಿರುವಳ್ಳವರ್ ಪ್ರತಿಮೆ ಅನಾವರಣಕ್ಕೆ ನಮ್ಮ ವಿರೋಧವಿಲ್ಲ. ಕನ್ನಡಪರ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಈ ಕಾರ್ಯಕ್ರಮ ಮಾಡ ಬೇಕಿತ್ತು ಮತ್ತು ಅವರನ್ನು ಬಂಧಿಸಿದ ಕ್ರಮ ಸರಿಯಲ್ಲ ಎಂದು ಹೇಳಿಕೆ ನೀಡಿದ್ದಾರೆ.
ತಿರುವಳ್ಳವರ್ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಶಿಷ್ಟಾಚಾರದ ಪಾಲನೆಯಾಗಿಲ್ಲ. ಮೇಲ್ಮನೆ ಪ್ರತಿಪಕ್ಷದ ನಾಯಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಿಲ್ಲ. ನಾವೇನೂ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತ ಪಡಿಸಲಿಲ್ಲ. ಭ್ರಷ್ಟ ಬಿಜೆಪಿ ಸರಕಾರವನ್ನು ರಾಜ್ಯದಿಂದ ತೊಲಗಿಸುವ ಕಾರ್ಯವಾಗಬೇಕಿದೆ. "ಬಿಜೆಪಿ ಚಲೇಜಾವ್" ಕಾರ್ಯಕ್ರಮವನ್ನು ಸದ್ಯದಲ್ಲೇ ಹಮ್ಮಿಕೊಳ್ಳಲಾಗುವುದು ಎಂದು ದೇಶಪಾಂಡೆ ಹೇಳಿಕೆ ನೀಡಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
Comments
ಆರ್ ವಿ ದೇಶಪಾಂಡೆ r v deshpande ಬಿಎಸ್ ವೈ thiruvalluvar ತಿರುವಳ್ಳುವರ್ ಕನ್ನಡ ಪರ ಸಂಘಟನೆಗಳು pro kannada organisation sarvajna ಸರ್ವಜ್ಞ
Story first published: Monday, August 10, 2009, 10:45 [IST]