ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶೀಘ್ರ ಬಿಜೆಪಿ ಚಲೇಜಾವ್ ಚಳವಳಿ: ದೇಶಪಾಂಡೆ

By Staff
|
Google Oneindia Kannada News

R V Deshpande
ಬೆಂಗಳೂರು, ಆ.10: ನಾರಾಯಣಗೌಡ ಸೇರಿದಂತೆ ಕನ್ನಡಪರ ಹೋರಾಟಗಾರರ ನಾಯಕರು ಮತ್ತು ಕಾರ್ಯಕರ್ತರನ್ನು ಶುಕ್ರವಾರದಂದೇ (ಆ. 7) ಸರಕಾರ ಬಂಧಿಸುವ ಕೆಲಸಕ್ಕೆ ಕೈಹಾಕಿತ್ತು. ಪ್ರತಿಮೆ ಅನಾವರಣ ಕಾರ್ಯಕ್ರಮದ ಒಂದು ದಿನದ ಮುಂಚೆಯೇ ಪ್ರಮುಖ ನಾಯಕರುಗಳು ಮತ್ತು ಕಾರ್ಯಕರ್ತರನ್ನು ಜೈಲಿಗೆ ಕಳುಹಿಸಿತ್ತು. ಇಷ್ಟೆಲ್ಲಾ ನಡೆದರೂ ಸುಮ್ಮನಿದ್ದ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಭಾನುವಾರದಂದು (ಆ. 9) ಪ್ರತಿಮೆ ಅನಾವರಣ ಕಾರ್ಯಕ್ರಮ ಮುಗಿದ ನಂತರ ಸರಕಾರ ಕನ್ನಡಪರ ಸಂಘಟನೆಗಳ ನಾಯಕರು ಮತ್ತು ಕಾರ್ಯಕರ್ತರನ್ನು ಬಂಧಿಸಿದ ಕ್ರಮವನ್ನು ತೀವ್ರವಾಗಿ ವಿರೋಧಿಸಿದ್ದಾರೆ.

ಭಾನುವಾರದಂದು (ಆ. 9) ಕ್ವಿಟ್ ಇಂಡಿಯಾ ಚಳುವಳಿ ಸ್ಮರಣಾರ್ಥ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ದೇಶಪಾಂಡೆ, ತಿರುವಳ್ಳವರ್ ಪ್ರತಿಮೆ ಅನಾವರಣಕ್ಕೆ ನಮ್ಮ ವಿರೋಧವಿಲ್ಲ. ಕನ್ನಡಪರ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಈ ಕಾರ್ಯಕ್ರಮ ಮಾಡ ಬೇಕಿತ್ತು ಮತ್ತು ಅವರನ್ನು ಬಂಧಿಸಿದ ಕ್ರಮ ಸರಿಯಲ್ಲ ಎಂದು ಹೇಳಿಕೆ ನೀಡಿದ್ದಾರೆ.

ತಿರುವಳ್ಳವರ್ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಶಿಷ್ಟಾಚಾರದ ಪಾಲನೆಯಾಗಿಲ್ಲ. ಮೇಲ್ಮನೆ ಪ್ರತಿಪಕ್ಷದ ನಾಯಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಿಲ್ಲ. ನಾವೇನೂ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತ ಪಡಿಸಲಿಲ್ಲ. ಭ್ರಷ್ಟ ಬಿಜೆಪಿ ಸರಕಾರವನ್ನು ರಾಜ್ಯದಿಂದ ತೊಲಗಿಸುವ ಕಾರ್ಯವಾಗಬೇಕಿದೆ. "ಬಿಜೆಪಿ ಚಲೇಜಾವ್" ಕಾರ್ಯಕ್ರಮವನ್ನು ಸದ್ಯದಲ್ಲೇ ಹಮ್ಮಿಕೊಳ್ಳಲಾಗುವುದು ಎಂದು ದೇಶಪಾಂಡೆ ಹೇಳಿಕೆ ನೀಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X