ಬೆಂಗಳೂರು : ಒಂಟಿ ಮಹಿಳೆಯ ಬರ್ಬರ ಹತ್ಯೆ
ಬೆಂಗಳೂರು, ಆ. 11 : ನಗರದಲ್ಲಿ ಒಂಟಿ ಮಹಿಳೆ ಕೊಲೆ ಪ್ರಕರಣಗಳು ಕಡಿಮೆಯಾದವು ಎಂದು ನಿಟ್ಟುಸಿರು ಬಿಡುತ್ತಿದ್ದಂತೆಯೇ ಇಂದು ಮನೆಯಲ್ಲಿದ್ದ ಒಂಟಿ ಮಹಿಳೆಯ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ನಡೆಸಿ ಬರ್ಬರವಾಗಿ ಹತ್ಯೆಗೈದಿರುವ ಪ್ರಕರಣ ಚೆನ್ನಮ್ಮನ ಅಚ್ಚುಕಟ್ಟು ಪೊಲೀಸ್ ಠಾಣೆ ವ್ಯಾಪ್ತಿಯ ಆಂಜನೇಯ ನಗರದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.
ಹೇಮಲತಾ (40 ) ಮೃತಪಟ್ಟ ಮಹಿಳೆ ಎಂದು ತಿಳಿದು ಬಂದಿದೆ. ಹಾಡುಹಗಲೇ ಒಂಟಿ ಮಹಿಳೆಯ ಭೀಕರ ಹತ್ಯೆ ನಡೆದಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಮೂರ್ನಾಲ್ಕು ಜನ ಸೇರಿಕೊಂಡು ಈ ಕೃತ್ಯ ಎಸಗಿರಬಹುದು ಎಂದು ಎನ್ನಲಾಗಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸ್ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಸಿದ್ದಾರೆ. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗಿದೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications