ಪುಣೆಯಲ್ಲಿ ಮತ್ತೊಬ್ಬ ಬಾಲಕಿ ಬಲಿ

ಪುಣೆಯ ಅಹಿಲ್ಯದೇವಿ ಶಾಲೆಯಲ್ಲಿ ಅಭ್ಯಾಸ ಮಾಡುತ್ತಿದ್ದ ಶ್ರುತಿ ಗವಾಡೆ ಇಂದು ನಸುಕಿನ ಜಾವ ಸಾವನ್ನಪ್ಪಿದ್ದಾಳೆ. ಶ್ರುತಿ ನಾರಾಯಣ ಪೇಟೆಯ ನಿವಾಸಿಯಾಗಿದ್ದು, ಹಂದಿಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಗಸ್ಟ್ 7 ರಿಂದ ಆಕೆಯನ್ನು ತುರ್ತುನಿಗಾ ಘಟಕದಲ್ಲಿ ಇರಿಸಲಾಗಿತ್ತು. ನಮ್ಮ ಆಸ್ಪತ್ರೆಗೆ ದಾಖಲಾದಾಗಲೇ ಶ್ರುತಿ ಆರೋಗ್ಯ ಗಂಭೀರ ಸ್ಥಿತಿಗೆ ತಲುಪಿತ್ತು. ನಾವು ಭಾರೀ ಪ್ರಯತ್ನ ಮಾಡಿದರೂ ಜೀವ ಉಳಿಸಲು ವಿಫಲವಾದೆವು ಎಂದು ಶ್ರುತಿ ಆರೋಗ್ಯ ತಪಾಸಣೆ ಮಾಡುತ್ತಿದ್ದ ಸಸೂನ್ ಆಸ್ಪತ್ರೆಯ ವೈದ್ಯ ಡಾ ಪಾಂಡುರಂಗ ಪವಾರ್ ತಿಳಿಸಿದ್ದಾರೆ.
ಶ್ರುತಿಗೆ ಟಾಮಿಪ್ಲು ಮಾತ್ರೆಯನ್ನು ನೀಡಲಾಗಿತ್ತು. ಆದರೆ, ಆಕೆ ಕಫ ಮತ್ತು ಉಸಿರಾಟದ ತೊಂದರೆ ಬಳಲುತ್ತಿದ್ದಳು. ಪುಣೆ ನಗರವೊಂದರಲ್ಲೇ 6 ಮಂದಿ ಹಂದಿಜ್ವರ ಸಾವನ್ನಪಿದ್ದಾರೆ. ಹಂದಿಜ್ವರದಿಂದ ತೀವ್ರ ಬಳಲುತ್ತಿದ್ದ ಪಾರ್ಮಸಿಸ್ಟ್ ಸಂಜಯ ಬಾವಾಸಾಹೇಬ್ (35) ಸಸೂನ್ ಆಸ್ಪತ್ರೆಯಲ್ಲೇ ಈಗಾಗಲೇ ಮೃತಪಟ್ಟಿದ್ದಾರೆ.
ವಿಶ್ವ ಬ್ಯಾಡ್ಮಿಂಟನ್ ಟೂರ್ನಾಮೆಂಟ್ ಮೇಲೆ ಹಂದಿಜ್ವರ ಕರಿನೆರಳು
ಹಂದಿಜ್ವರದ ಬಾಧೆ ಹೈದರಾಬಾದ್ ನಲ್ಲಿ ನಡೆಯುತ್ತಿರುವ ವಿಶ್ವ ಬ್ಯಾಡ್ಮಿಂಟನ್ ಟೂರ್ನಾಮೆಂಟ್ ಗೂ ತಟ್ಟಿದ್ದು, ಮಲೇಷಿಯಾ ತಂಡದ ಕೋಚ್ ಮಿಸ್ಬನ್ ಸಿಡೆಕ್ ಅವರಿಗೆ ಹಂದಿಜ್ವರದ ಸೋಂಕು ಕಾಣಿಸಿಕೊಂಡಿದೆ. ಗಂಟಲು ಹಾಗೂ ಎದೆ ನೋವಿನಿಂದ ಬಳಲುತ್ತಿದ್ದ ಅವರನ್ನು ತಕ್ಷಣ ಆಸ್ಪತ್ರೆ ದಾಖಲಿಸಿ, ಪರೀಕ್ಷೆ ನಡೆಸಿದಾಗ ಹಂದಿಜ್ವರ ಇರುವುದು ಪತ್ತೆಯಾಗಿದೆ. ಹಂದಿಜ್ವರದ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಟೂರ್ನಾಮೆಂಟ್ ನ ಮುಖ್ಯಸ್ಥ ಪುಲ್ಲೇಲು ಗೋಪಿಚಂದ್ ಹೇಳಿದ್ದಾರೆ.
ಪಂದ್ಯಾವಳಿಯಲ್ಲಿ 42 ದೇಶಗಳ 250 ಆಟಗಾರರು ಭಾಗವಹಿಸಿದ್ದಾರೆ. 6 ದಿನಗಳ ಕಾಲ ನಡೆಯುವ ಈ ಪಂದ್ಯಾವಳಿಗಳಿಗೆ ಉಗ್ರರ ದಾಳಿಯ ಎಚ್ಚರಿಕೆಯೂ ಇದೆ.
(ಏಜನ್ಸೀಸ್)
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications