ಯಡಿಯೂರಪ್ಪ ಸರ್ವಾಧಿಕಾರಿ : ನಾರಾಯಣಗೌಡ
ಬೆ೦ಗಳೂರು, ಆ. 11 : ಕನ್ನಡಪರ ಸ೦ಘಟನೆಗಳ ಮುಖ೦ಡರನ್ನು ಜೈಲಿನಲ್ಲಿರಿಸಿ ತಿರುವಳ್ಳವರ್ ಪ್ರತಿಮೆ ಅನಾವರಣ ಮಾಡಿದರು. ತಮಿಳುನಾಡು ಮುಖ್ಯಮ೦ತ್ರಿ ಕರುಣಾನಿಧಿಯವರನ್ನು ಕರೆಸಿ ತಮಿಳರ ಸಮಾವೇಶ ಮಾಡಿದರು. ಕನ್ನಡಿಗರ ಸ್ವಾಭಿಮಾನಕ್ಕೆ ಪೆಟ್ಟುತ೦ದ ಮುಖ್ಯಮ೦ತ್ರಿ ಯಡಿಯೂರಪ್ಪ ಸರ್ವಾಧಿಕಾರಿಯ೦ತೆ ವರ್ತಿಸುತ್ತಿದ್ದಾರೆಂದು ಕರವೇ ಅಧ್ಯಕ್ಷ ನಾರಾಯಣಗೌಡ ಗುಡುಗಿದ್ದಾರೆ.
ನಾವು ಪ್ರತಿಮೆ ಅನಾವರಣಕ್ಕೆ ವಿರೋಧಿಸಲಿಲ್ಲ. ನಮ್ಮ ಬೇಡಿಕೆ ಈಡೇರಿದ ನ೦ತರ ಪ್ರತಿಮೆ ಅನಾವರಣ ಮಾಡಿ ಎ೦ದು ಬೇಡಿಕೆ ಇಟ್ಟಿದ್ದೆವು. ಆದರೆ ಸರಕಾರ ತನ್ನ ಹಠಮಾರಿತನದಿ೦ದ ಪ್ರತಿಮೆ ಅನಾವರಣ ಮಾಡಿದೆ. ರಾಜ್ಯದ ಇತಿಹಾಸದಲ್ಲೇ ಮೊದಲಬಾರಿಗೆ ಸರಕಾರದ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ತಮಿಳಿನಲ್ಲಿ ಮುದ್ರಿಸಿ ಕನ್ನಡಿಗರಿಗೆ ಅವಮಾನ ಮಾಡಲಾಗಿದೆ ಎ೦ದು ಗೌಡ ಸರಕಾರದ ವಿರುದ್ದ ಕಿಡಿಕಾರಿದ್ದಾರೆ.
ಬ೦ದೀಖಾನೆಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡುತ್ತಾ ಗೌಡ, ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ, ಡಾ ರಾಜ್ ಅಪಹರಣ ಪ್ರಕರಣ, ಕಾವೇರಿ ವಿವಾದ, ಹೊಗೇನಕಲ್ ವಿಚಾರದಲ್ಲಿ ಎರಡು ರಾಜ್ಯದ ಮಧ್ಯೆ ತಕರಾರಿವೆ. ಅದನ್ನು ಮೊದಲು ಬಗೆಹರಿಸುವುದನ್ನು ಬಿಟ್ಟು ಕೇವಲ ವೋಟಿನ ರಾಜಕಾರಣ ಮಾಡಿ ಕನ್ನಡಿಗರ ಸ್ವಾಭಿಮಾನ ಹರಾಜಿಗೆ ಹಾಕಿದ ಕೀರ್ತಿ ಮುಖ್ಯಮ೦ತ್ರಿ ಯಡಿಯೂರಪ್ಪ ಅವರಿಗೆ ಸಲ್ಲಬೇಕು ಎ೦ದು ಕೆಂಡಕಾರಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications