ಹಂದಿಜ್ವರಕ್ಕೆ 14 ಮಂದಿ ಬಲಿ
ನವದೆಹಲಿ, ಆ. 12 : ದೇಶದ್ಯಾಂತ ಹಂದಿಜ್ವರ ಉಲ್ಬಣಗೊಂಡಿದ್ದು, ನಾಸಿಕ್ ವೈದ್ಯಾಧಿಕಾರಿಯೊಬ್ಬರು ಈ ಸೋಂಕಿನಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಮೂಲಕ ಹಂದಿಜ್ವರದಿಂದ ಸತ್ತಿರುವವರ ಸಂಖ್ಯೆ 14ಕ್ಕೆ ಏರಿದೆ. ರಾಜ್ಯದಲ್ಲೂ ಸೋಂಕು ಹಬ್ಬತೊಡಗಿದ್ದು, ಬೆಳಗಾವಿಯಲ್ಲಿ ಮತ್ತಿಬ್ಬರಿಗೆ ಹಂದಿಜ್ವರ ಕಾಣಿಸಿಕೊಂಡಿದೆ. ಈ ಇಬ್ಬರು ಕಳೆದ ವಾರದಿಂದ ಮುಂಬೈನಿಂದ ಬೆಳಗಾವಿಗೆ ಆಗಮಿಸಿದ್ದರು ಎಂದು ತಿಳಿದು ಬಂದಿದೆ.
ಪುಣೆ ನಗರದಲ್ಲಿ ಇದರ ಹಾವಳಿ ತೀವ್ರಗೊಂಡಿದ್ದು, ಮಂಗಳವಾರ ಸಸೂನ್ ಆಸ್ಪತ್ರೆಗೆ ದಾಖಲಾಗಿದ್ದ 29 ವರ್ಷದ ಮಹಿಳೆ ಸಾವನ್ನಪ್ಪಿದ್ದರು. ಅಲ್ಲದೇ ಬುಧವಾರಕೂಡಾ ಇದೇ ಆಸ್ಪತ್ರೆ 35 ವರ್ಷದ ಸಂಜಯ್ ಮಿಸ್ತ್ರಿ ಎಂಬುವವರು ಎಚ್ 1 ಎನ್ ವೈರಾಣುವಿನಿಂದ ಮೃತಪಟ್ಟಿದ್ದರು. ಕೇರಳದಲ್ಲಿ ಕೂಡಾ ಈ ಮಾರಿಗೆ ಮೊದಲ ಬಲಿಯಾಗಿದ್ದು, 35 ವರ್ಷದ ವಿಲ್ಸನ್ ಎಂಬುವವರು ತಿರುವನಂತಪುರಂ ಕೇರಳ ವೈದ್ಯಕೀಯ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಮಂಗಳವಾರ ಒಂದೇ ದಿನ 119 ಮಂದಿಯಲ್ಲಿ ಎಚ್ 1ಎನ್ 1 ಸೋಂಕು ಇರುವುದು ಪತ್ತೆಯಾಗಿದೆ. ಜಮ್ಮು, ಓಸ್ಮಾನಬಾದ್, ನಾಗಪುರ್, ನಾಸಿಕ್, ಮಣಿಪಾಲ್ ನಗರಗಳಲ್ಲಿ ಸೋಂಕಿರುವ ವ್ಯಕ್ತಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಭಾರತದಲ್ಲಿ ಒಟ್ಟು 1079 ಮಂದಿಯಲ್ಲಿ ಹಂದಿಜ್ವರ ಕಾಣಿಸಿಕೊಂಡಿದ್ದು, ಅದರಲ್ಲಿ 589 ಮಂದಿಯ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
(ಏಜನ್ಸೀಸ್)
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ












Click it and Unblock the Notifications