ಸರ್ವಜ್ಞ ಪ್ರತಿಮೆ ಅನಾವಣರಕ್ಕೆ ಚೆನ್ನೈ ಸಜ್ಜು

ಗುರುವಾರ ನಡೆಯಲಿರುವ ಸರಕಾರಿ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಆರಂಭವಾಗಿದ್ದು, ಮದ್ರಾಸ್ ಕನ್ನಡ ಸಂಘ ಸೇರಿದಂತೆ ಚೆನ್ನೈ ನಗರದಲ್ಲಿ ವಾಸವಾಗಿರುವ ಕನ್ನಡಿಗರು ಸರ್ವಜ್ಞ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಹಾಜರಾಗುವ ನಿರೀಕ್ಷೆಯಿದೆ. ಕಳೆದ ವಾರದಿಂದ ಜೀವಾ ಪಾರ್ಕ್ ನಲ್ಲಿ ಕನ್ನಡಿಗರು ಹಬ್ಬದ ವಾತಾವರಣ ಸೃಷ್ಟಿಸಿದ್ದಾರೆ. ಅಯನಾವರಂ ಪ್ರದೇಶದ ಯುನೈಟೆಡ್ ಇಂಡಿಯಾ ಕಾಲೋನಿಯಲ್ಲಿ ವಾಸಿಸುವ ಬಹುತೇಕ ಜನರು ಕನ್ನಡಿಗರು ಎನ್ನುವುದು ವಿಶೇಷ.
9 ಅಡಿ ಎತ್ತರದ ಸರ್ವಜ್ಞರ ಕಂಚಿನ ಪ್ರತಿಮೆಯನ್ನು ಈಗಾಗಲೇ ಪಾರ್ಕ್ ಗೆ ತರಲಾಗಿದೆ. ಅನಾವರಣ ಸಂದರ್ಭದಲ್ಲಿ ಯಾವುದೇ ಅವಗಢ ಸಂಭವಿಸದಂತೆ ಬಿಗಿಭದ್ರತೆಯನ್ನು ಒದಗಿಸಲಾಗಿದೆ. ಸುಮಾರು 100ಕ್ಕೂ ಹೆಚ್ಚು ಕಾರ್ಮಿಕರು ಪಾರ್ಕ್ ಸುಚಿತ್ವದಲ್ಲಿ ತೊಡಗಿದ್ದಾರೆ. ಮೈಸೂರಿನ ಶಿಲ್ಪಿ ವಿಮಲಾ ಆಚಾರ್ಯ ಅವರು ಸರ್ವಜ್ಞ ಮೂರ್ತಿ ತಯಾರಿಸಿದ್ದಾರೆ. ಚೆನ್ನೈ ಮಹಾನಗರ ಪಾಲಿಕೆ ಹಾಗೂ ಕರ್ನಾಟಕದ ಲೋಕೋಪಯೋಗಿ ಇಲಾಖೆಗಳು ಅನಾವರಣ ಕಾರ್ಯಕ್ರಮದಲ್ಲಿ ಸಕ್ರಿಯವಾಗಿವೆ.
ಹೆಸರಾಂತ ಎಡಪಂಥೀಯ ಮುಖಂಡ ಜೀವಾ ಅವರ ಹೆಸರನ್ನೇ ಈ ಪಾರ್ಕ್ ಗೆ ಇಡಲಾಗಿದೆ. ಜೀವಾ ಅವರೇ ಈ ಪಾರ್ಕ್ ಗೆ ಕನ್ನಡಿಗರ ಪಾರ್ಕ್ ಎಂದು ನಾಮಕರಣ ಮಾಡಿದ್ದಾರೆ. ರಾಜಕೀಯ ತಿಕ್ಕಾಟ ಮತ್ತು ಸಂಘಟನೆಗಳು ವಿರೋಧದ ನಡುವೆಯೂ ತಿರುವಳ್ಳುವರ್ ಹಾಗೂ ಸರ್ವಜ್ಞ ಪ್ರತಿಮೆ ಅನಾವರಣ ಆಗುತ್ತಿರುವುದು ಸಂತಸದ ಸಂಗತಿ ಎಂದು ಮದ್ರಾಸ್ ರಿಫೈನರಿ ಲಿಮಿಟೆಡ್ ನ ಉದ್ಯೋಗಿ ಚೆನ್ನೈ ನಿವಾಸಿ ಕನ್ನಡಿಗ ಅಶೋಕ್ ಕಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವರ್ಣರಂಜಿತ ಸರ್ವಜ್ಞ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಚೆನ್ನೈನಲ್ಲಿರುವ ಕನ್ನಡ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಭವ್ಯ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲು ಕರ್ನಾಟಕದಿಂದ ಮುಖ್ಯಮಂತ್ರಿ ಸೇರಿದಂತೆ ಸಚಿವರ ದಂಡು, ಸಾಹಿತಿಗಳಾದ ಜಿಎಸ್ ಶಿವರುದ್ರಪ್ಪ, ಹಂಪಾ ನಾಗರಾಜ್, ಚಿದಾನಂದಮೂರ್ತಿ ಹಾಗೂ ಚಿತ್ರನಟರಾದ ವಿಷ್ಣುವರ್ಧನ್, ಪಾರ್ವತಮ್ಮ ರಾಜ್ ಕುಮಾರ್, ಕರ್ನಾಟಕ ಚಲನಚಿತ್ರ ಆಡಳಿತ ಮಂಡಳಿ ಅಧ್ಯಕ್ಷೆ ಜಯಮಾಲಾ, ತಾರಾ, ಬಿ ಸರೋಜಾದೇವಿ, ವನಿತಾವಾಸು, ರಾಕ್ ಲೈನ್ ವೆಂಕಟೇಶ್, ಸಾ ರಾ ಗೋವಿಂದು, ರಮೇಶ್ ಅರವಿಂದ, ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ವಿಶೇಷವೆಂದರೆ ತಮಿಳು ಸಂಘಟನೆಗಳು ಸರ್ವಜ್ಞ ಪ್ರತಿಮೆ ಅನಾವರಣಕ್ಕೆ ಯಾವುದೇ ಅಡ್ಡಿ ವ್ಯಕ್ತಪಡಿಸಿಲ್ಲ.
ಅಂದ ಹಾಗೆ, ಕರ್ನಾಟಕದಲ್ಲಿ ಸರ್ವಜ್ಞನ ಪ್ರತಿಮೆ ಎಲ್ಲಿದೆ?
ಕಾರ್ಯಕ್ರಮ ವಿವರ
* ಆಗಸ್ಟ್ 13ರ ಗುರುವಾರ ಸಂಜೆ 4 ಗಂಟೆ
* ಸ್ಥಳ : ಜೀವಾ ಪಾರ್ಕ್, ಅಯನಾವರಂ, ಚೆನ್ನೈ
* ಕಾರ್ಯಕ್ರಮ ಆರಂಭವಾಗುವುದು ತಮಿಳು ನಾಡಗೀತೆಯೊಂದಿಗೆ.
* ಸ್ವಾಗತ ಭಾಷಣ ಮಾಡಲಿರುವವರು ತಮಿಳುನಾಡು ಮಾಹಿತಿ ಇಲಾಖೆ ಸಚಿವ ಪರಿಧಿ ಇಳಂವಳುದಿ.
* ಮುಖ್ಯಮಂತ್ರಿ ಎಂ.ಕರುಣಾನಿಧಿ ಅಧ್ಯಕ್ಷತೆಯಲ್ಲಿ ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಮೆ ಅನಾವರಣಗೊಳಿಸುತ್ತಾರೆ.
* ಗೃಹ ಸಚಿವ ಡಾ.ವಿ.ಎಸ್.ಆಚಾರ್ಯ ಆಶಯ ಭಾಷಣ ಮಾಡಲಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications