ಯಡಿಯೂರಪ್ಪ ಇನ್ನು ಮುಂದೆ ಚಿನ್ನತಂಬಿ
ಹಾಸನ, ಆ.12: ನಿಜಲಿಂಗಪ್ಪ, ಜೆ ಎಚ್ ಪಟೇಲ್, ಎಸ್ ಎಂ ಕೃಷ್ಣ, ದೇವೇಗೌಡ ಮುಂತಾದವರು ರಾಜ್ಯದ ಮುಖ್ಯಮಂತ್ರಿ ಆದಾಗಿನಿಂದಲೂ ಕನ್ನಡಪರ ಹೋರಾಟವನ್ನು ನಡೆಸುತ್ತಾ ಬಂದಿದ್ದೇನೆ. ನನ್ನ 50 ವರ್ಷದ ಹೋರಾಟದಲ್ಲಿ ಇಂತಹ ಮಾನಸಿಕ ಮತ್ತು ದೈಹಿಕ ನೋವನ್ನು ಅನುಭವಿಸಿರಲಿಲ್ಲ. ಮುಖ್ಯಮಂತ್ರಿ ಅವರನ್ನು ಇನ್ನು ಮುಂದೆ ಯಡಿಯೂರಪ್ಪ ಎಂದು ಕರೆಯುವುದಿಲ್ಲ ಬದಲಾಗಿ 'ಚಿನ್ನತಂಬಿ' ಎಂದು ಕರೆಯುತ್ತೇನೆ ಎಂದು ಮಾಜಿ ಶಾಸಕ ವಾಟಾಳ್ ನಾಗರಾಜ್ ಹೇಳಿಕೆ ನೀಡಿದ್ದಾರೆ.
ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ ಜಾಮೀನಿನ ಮೇಲೆ ಬಿಡುಗಡೆಗೊಂಡ ನಂತರ ಮಾಧ್ಯಮದವರ ಜೊತೆ ಮಾತನಾಡಿದ ವಾಟಾಳ್, ನನ್ನ ಬಂಧನದ ಹಿಂದೆ ನೇರ ಮುಖ್ಯಮಂತ್ರಿಗಳ ಕೈವಾಡವಿದೆ. ಇಲ್ಲ ಸಲ್ಲದ ಮೊಕದ್ದಮೆಗಳನ್ನು ನನ್ನ ಮೇಲೆ ಹೊರಿಸಿ ಜಾಮೀನು ಸಿಗದಂತೆ ಮಾಡಿದ್ದರು. ನಾವೇನೂ ಭಯೋತ್ಪಾದನಾ ಕ್ರತ್ಯ ನಡೆಸುತ್ತಿಲ್ಲ. ಚಿನ್ನತಂಬಿ ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ತಮಿಳುನಾಡಿನ ಉಪ ಮುಖ್ಯಮಂತ್ರಿಯೋ ಎಂದು ಕಿಡಿಕಾರಿದ್ದಾರೆ.
ಕನ್ನಡಿಗರ ಸ್ವಾಭಿಮಾನದ ಜೊತೆ ಆಟವಾಡುತ್ತಿರುವ ಚಿನ್ನತಂಬಿ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯಲು ಅನರ್ಹರು. ಜೈಲಿನಲ್ಲಿ ನನ್ನನ್ನು ಸಾಮನ್ಯ ಕೈದಿಗಳ ಹಾಗೆ ನಡೆಸಿಕೊಳ್ಳಲಾಯಿತು, ನನ್ನ ಜೀವನದಲ್ಲಿ ಇದುವರೆಗೆ ಇಂತಹ ಸರ್ವಾಧಿಕಾರಿ ಮುಖ್ಯಮಂತ್ರಿಯನ್ನು ನೋಡಿರಲಿಲ್ಲ. ನನ್ನ ಹೋರಾಟ ಇನ್ನೂ ಮುಂದುವರಿಯುತ್ತದೆ, ಸಂಘಟನೆಗಳ ವಿರೋಧದ ನಡುವೆಯೂ ತಿರುವಳ್ಳವರ್ ಪ್ರತಿಮೆ ಅನಾವರಣ ಮಾಡಿರುವುದು ಅಕ್ಷ್ಯಮ್ಯ ಅಪರಾಧ ಎಂದು ವಾಟಾಳ್ ಚಿನ್ನತಂಬಿ ಮೇಲೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ












Click it and Unblock the Notifications