ಎಚ್ 1ಎನ್1 ಕುಣಿತ : ಆರೋಗ್ಯ ಮಂತ್ರಿ ನಾಪತ್ತೆ

ಕಳೆದ ಒಂದು ವಾರದಿಂದ ದೇಶದಲ್ಲಿ ಹೆಮ್ಮಾರಿ ಕುಣಿತ ಮೇರೆ ಮೀರಿದೆ. ಪುಣೆಯಿಂದ ಆರಂಭವಾಗಿರುವ ಈ ಪೀಡೆ ದಿನ ಕಳೆದಂತೆ ದೇಶದ ವಿವಿಧ ನಗರಗಳಲ್ಲಿ ವ್ಯಾಪಿಸತೊಡಗಿದೆ. ಬೆಂಗಳೂರು ಮತ್ತು ಉಡುಪಿ ಮತ್ತು ಬೆಳಗಾವಿ ನಗರಗಳಲ್ಲಿ ಎಚ್ ಎನ್ ಸೋಂಕಿರುವ ವ್ಯಕ್ತಿಗಳನ್ನು ಪತ್ತೆಹಚ್ಚಲಾಗಿದೆ. ಮರಣಮೃದಂಗ ಬಾರಿಸುತ್ತಿರುವ ಭೀಕರ ಕಾಯಿಲೆಗೆ ರಾಜ್ಯದ ಜನರು ಭಯಭೀತರಾಗಿರುವುದು ಸುಳ್ಳಲ್ಲ. ಆದರೆ, ಆರೋಗ್ಯ ಸಚಿವ ಬಿ ಶ್ರೀರಾಮುಲು ಕಾಣಿಯಾಗಿರುವುದು ಮಾತ್ರ ಯಡಿಯೂರಪ್ಪ ನೇತೃತ್ವದ ಸರಕಾರಕ್ಕೆ ಸಾರ್ವಜನಿಕರು ಹಿಡಿ ಶಾಪ ಹಾಕುತ್ತಿರುವುದು ಮುಂದುವರೆದಿದೆ.
ಬೆಂಗಳೂರಿನ ಸರ್ಜಾಪುರದಲ್ಲಿ ಅಮೃತಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಎಚ್ 1ಎನ್ 1 ಪತ್ತೆಯಾಗಿದ್ದರಿಂದ ಕಾಲೇಜಿನ ರಜೆ ಘೋಷಿಸಲಾಗಿದೆ. ಜೊತೆಗೆ ಮುಂಜಾಗ್ರತಾ ಕ್ರಮವಾಗಿ ನಗರದ ವಿವಿಧ ಶಾಲೆಗಳು ರಜೆ ನೀಡಿವೆ. ಆದರೆ, ಗೃಹ ಸಚಿವ ವಿ ಎಸ್ ಆಚಾರ್ಯ ಮತ್ತು ಆರೋಗ್ಯ ಇಲಾಖೆ ಕಾರ್ಯದರ್ಶಿ ಐ ಆರ್ ಪೆರುಮಾಳ್ ಅವರು ಬೇಜಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಇವರು, ರಾಜ್ಯ ಈ ಮಾರಿಗೆ ತಡೆಗೆ ಸನ್ನದ್ಧವಾಗಿದೆ ಎಂದು ಒಬ್ಬರು ಹೇಳಿದ್ದರೆ, ಸೋಂಕಿರುವವರು ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎಂದು ನೀಡಿರುವ ಹೇಳಿಕೆ ಖಂಡನೀಯ. ಅಲ್ಲದೇ. ಆತಂಕಗೊಂಡ ಜನ ರಾಜೀವ ಗಾಂಧಿ ಎದೆರೋಗ ಆಸ್ಪತ್ರೆಗೆ ದೌಡಾಯಿಸಿದರೆ, ಅಲ್ಲಿ ಕಿಟ್ ಇಲ್ಲ, ಇನ್ನೊಂದಿಲ್ಲ ಎಂಬ ಉತ್ತರ ಕೇಳಿದ ಮಂದಿ ಧರೆಗಿಳಿದು ಹೋಗಿದ್ದಾರೆ. ಕಳೆದ ಮೂರು ದಿನಗಳಿಂದ ರಾಜೀವ ಗಾಂಧಿ ಆಸ್ಪತ್ರೆಯ ಮುಂದೆ ಜನರ ದೊಡ್ಡ ಸಾಲು ನೋಡಬಹುದಾಗಿದೆ.
ರಾಜ್ಯದಲ್ಲಿ ವ್ಯಾಪಕವಾಗುತ್ತಿರುವ ಮಾರಿಗೆ ತಡೆದೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಕ್ತ ನಿರ್ದೇಶನ ನೀಡುವುದು ಬಿಟ್ಟು ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಲು ಸಾಹಸ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಬೇಕು ಎನ್ನುವ ಏಕೈಕ ಗುರಿಯಾಗಿರಿಸಿಕೊಂಡಿರುವ ಸರಕಾರ ಮನಸ್ಥಿತಿಗೆ ಜನರ ಶಾಪ ತಟ್ಟದೆ ಇರದು. ಆರೋಗ್ಯ ಇಲಾಖೆ ಇದ್ದು ಇಲ್ಲದಂತಾಗಿದೆ. ಸೋಂಕು ಹಬ್ಬಿತ್ತಿದ್ದರೂ ಈವರೆಗೂ ಜನರಿಗೆ ಧೈರ್ಯ ಹೇಳುವ ಕೆಲಸ ಮಾಡದಿರುವ ಆರೋಗ್ಯ ಮಂತ್ರಿ ಏಕೆ ಎನ್ನುವುದು ಜನರ ಪ್ರಶ್ನೆಯಾಗಿದೆ. ಶೀಘ್ರ ಮುಖ್ಯಮಂತ್ರಿಗಳು ಇತ್ತ ಕಡೆ ಗಮನ ಹರಿಸಿಬೇಕಾಗಿದೆ.
(ದಟ್ಸ್ ಕನ್ನಡ ವಾರ್ತೆ)
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications