ಎಚ್ 1ಎನ್1 ಕುಣಿತ : ಆರೋಗ್ಯ ಮಂತ್ರಿ ನಾಪತ್ತೆ

ಕಳೆದ ಒಂದು ವಾರದಿಂದ ದೇಶದಲ್ಲಿ ಹೆಮ್ಮಾರಿ ಕುಣಿತ ಮೇರೆ ಮೀರಿದೆ. ಪುಣೆಯಿಂದ ಆರಂಭವಾಗಿರುವ ಈ ಪೀಡೆ ದಿನ ಕಳೆದಂತೆ ದೇಶದ ವಿವಿಧ ನಗರಗಳಲ್ಲಿ ವ್ಯಾಪಿಸತೊಡಗಿದೆ. ಬೆಂಗಳೂರು ಮತ್ತು ಉಡುಪಿ ಮತ್ತು ಬೆಳಗಾವಿ ನಗರಗಳಲ್ಲಿ ಎಚ್ ಎನ್ ಸೋಂಕಿರುವ ವ್ಯಕ್ತಿಗಳನ್ನು ಪತ್ತೆಹಚ್ಚಲಾಗಿದೆ. ಮರಣಮೃದಂಗ ಬಾರಿಸುತ್ತಿರುವ ಭೀಕರ ಕಾಯಿಲೆಗೆ ರಾಜ್ಯದ ಜನರು ಭಯಭೀತರಾಗಿರುವುದು ಸುಳ್ಳಲ್ಲ. ಆದರೆ, ಆರೋಗ್ಯ ಸಚಿವ ಬಿ ಶ್ರೀರಾಮುಲು ಕಾಣಿಯಾಗಿರುವುದು ಮಾತ್ರ ಯಡಿಯೂರಪ್ಪ ನೇತೃತ್ವದ ಸರಕಾರಕ್ಕೆ ಸಾರ್ವಜನಿಕರು ಹಿಡಿ ಶಾಪ ಹಾಕುತ್ತಿರುವುದು ಮುಂದುವರೆದಿದೆ.
ಬೆಂಗಳೂರಿನ ಸರ್ಜಾಪುರದಲ್ಲಿ ಅಮೃತಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಎಚ್ 1ಎನ್ 1 ಪತ್ತೆಯಾಗಿದ್ದರಿಂದ ಕಾಲೇಜಿನ ರಜೆ ಘೋಷಿಸಲಾಗಿದೆ. ಜೊತೆಗೆ ಮುಂಜಾಗ್ರತಾ ಕ್ರಮವಾಗಿ ನಗರದ ವಿವಿಧ ಶಾಲೆಗಳು ರಜೆ ನೀಡಿವೆ. ಆದರೆ, ಗೃಹ ಸಚಿವ ವಿ ಎಸ್ ಆಚಾರ್ಯ ಮತ್ತು ಆರೋಗ್ಯ ಇಲಾಖೆ ಕಾರ್ಯದರ್ಶಿ ಐ ಆರ್ ಪೆರುಮಾಳ್ ಅವರು ಬೇಜಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಇವರು, ರಾಜ್ಯ ಈ ಮಾರಿಗೆ ತಡೆಗೆ ಸನ್ನದ್ಧವಾಗಿದೆ ಎಂದು ಒಬ್ಬರು ಹೇಳಿದ್ದರೆ, ಸೋಂಕಿರುವವರು ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎಂದು ನೀಡಿರುವ ಹೇಳಿಕೆ ಖಂಡನೀಯ. ಅಲ್ಲದೇ. ಆತಂಕಗೊಂಡ ಜನ ರಾಜೀವ ಗಾಂಧಿ ಎದೆರೋಗ ಆಸ್ಪತ್ರೆಗೆ ದೌಡಾಯಿಸಿದರೆ, ಅಲ್ಲಿ ಕಿಟ್ ಇಲ್ಲ, ಇನ್ನೊಂದಿಲ್ಲ ಎಂಬ ಉತ್ತರ ಕೇಳಿದ ಮಂದಿ ಧರೆಗಿಳಿದು ಹೋಗಿದ್ದಾರೆ. ಕಳೆದ ಮೂರು ದಿನಗಳಿಂದ ರಾಜೀವ ಗಾಂಧಿ ಆಸ್ಪತ್ರೆಯ ಮುಂದೆ ಜನರ ದೊಡ್ಡ ಸಾಲು ನೋಡಬಹುದಾಗಿದೆ.
ರಾಜ್ಯದಲ್ಲಿ ವ್ಯಾಪಕವಾಗುತ್ತಿರುವ ಮಾರಿಗೆ ತಡೆದೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಕ್ತ ನಿರ್ದೇಶನ ನೀಡುವುದು ಬಿಟ್ಟು ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಲು ಸಾಹಸ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಬೇಕು ಎನ್ನುವ ಏಕೈಕ ಗುರಿಯಾಗಿರಿಸಿಕೊಂಡಿರುವ ಸರಕಾರ ಮನಸ್ಥಿತಿಗೆ ಜನರ ಶಾಪ ತಟ್ಟದೆ ಇರದು. ಆರೋಗ್ಯ ಇಲಾಖೆ ಇದ್ದು ಇಲ್ಲದಂತಾಗಿದೆ. ಸೋಂಕು ಹಬ್ಬಿತ್ತಿದ್ದರೂ ಈವರೆಗೂ ಜನರಿಗೆ ಧೈರ್ಯ ಹೇಳುವ ಕೆಲಸ ಮಾಡದಿರುವ ಆರೋಗ್ಯ ಮಂತ್ರಿ ಏಕೆ ಎನ್ನುವುದು ಜನರ ಪ್ರಶ್ನೆಯಾಗಿದೆ. ಶೀಘ್ರ ಮುಖ್ಯಮಂತ್ರಿಗಳು ಇತ್ತ ಕಡೆ ಗಮನ ಹರಿಸಿಬೇಕಾಗಿದೆ.
(ದಟ್ಸ್ ಕನ್ನಡ ವಾರ್ತೆ)
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
Karnataka Weather: ಕಲಬುರಗಿಯಲ್ಲಿ 41ಡಿಸೆ ತಾಪಮಾನ, ಉಷ್ಣಅಲೆ ಎಚ್ಚರಿಕೆ, ಕೆಲವೆಡೆ ಮಳೆ ಸಾಧ್ಯತೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್












Click it and Unblock the Notifications