ಸಿಎಂರಿಂದ ರಾಜ್ಯ ಹಾಳಾಗುತ್ತಿದೆ, ಬಂಗಾರಪ್ಪ

ಮರು ಚುನಾವಣೆಯ ಸೋಲು ಮತ್ತು ಗೆಲುವಿನ ಬಗ್ಗೆ ತಲೆಕೆಡಿಸಿಕೊಂಡಿರುವ ಅವರಿಗೆ ಜನರ ಬಗ್ಗೆ ಕಾಳಜಿ ಇಲ್ಲ. ವಿಧಾನಸೌಧದಲ್ಲಿ ಚುನಾವಣ ರಾಜಕೀಯದ ಬಗ್ಗೆ ಚರ್ಚಿಸುವ ಮುಖ್ಯಮಂತ್ರಿಗಳಿಗೆ ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕೆನ್ನುವ ಕನಿಷ್ಟ ಕಾಳಜಿ ಕೂಡ ಇಲ್ಲ. ಇನ್ನು ಆರೋಗ್ಯ ಸಚಿವರು ಎಲ್ಲಿದ್ದಾರೋ ಸ್ವತಃ ಮುಖ್ಯಮಂತ್ರಿಗಳಿಗೂ ಗೊತ್ತಿರಕ್ಕಿಲ್ಲ. ಈವರೆಗೆ ಜಿಲ್ಲಾ ಆರೋಗ್ಯಾಧಿಕಾರಿಗಳ ಒಂದೇ ಒಂದು ಸಭೆ ನಡೆದಿಲ್ಲ ಎಂದೂ ಬಂಗಾರಪ್ಪ ತರಾಟೆಗೆ ತೆಗೆದುಕೊಂಡಿದ್ದಾರೆ.
ಬಿಜೆಪಿ ಸರಕಾರದ ಒಳಗೆ ಗುದ್ದಾಟ ಶುರುವಾಗಿದೆ. ಯಡಿಯೂರಪ್ಪಗೆ ಬಲವಾದ ಗುದ್ದುಗಳು ಬೀಳುತ್ತಿವೆ. ಭಿನ್ನಮತ ಯಾವಾಗ ಸ್ಪೋಟಗೊಳ್ಳುತ್ತದೆ ಎಂದು ಹೇಳಲಾಗದು. ಹಂದಿಜ್ವರ ಸೋಂಕು ನಿಯಂತ್ರಣಕ್ಕೆ ಸರಕಾರ ಸರಿಯಾದ ಕ್ರಮಕೈಗೊಂಡಿಲ್ಲ. ರಾಜ್ಯದ ಆರ್ಥಿಕ ಸ್ಥಿತಿ ಸಂಪೂರ್ಣ ಹದೆಗೆಟ್ಟಿದೆ. ತೆರಿಗೆ ಸಂಗ್ರಹದಲ್ಲಿ ಎಂಟು ಸಾವಿರ ಕೋಟಿ ರೂಪಾಯಿ ಕೊರತೆ ಕಂಡಿದೆ. ವಿದ್ಯುತ್ ಕೊರತೆ ನಿಭಾಯಿಸುವ ಶಕ್ತಿ ಸರಕಾರಕ್ಕೆ ಇಲ್ಲ ಎಂದೂ ಬಂಗಾರಪ್ಪ ಟೀಕಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)











Click it and Unblock the Notifications