ಅಭ್ಯರ್ಥಿ ಗೆಲ್ಲಿಸದಿದ್ದರೆ ತೊಟ್ಟ ವಿಷಕೊಡಿ : ಎಚ್ಡಿಕೆ

ರಾಮನಗರದಲ್ಲಿ ಪಕ್ಷದ ಅಭ್ಯರ್ಥಿ ಕೆ ರಾಜು ಅವರನ್ನು ಸೋಲಿಸುವುದಾದರೆ ನನಗೆ ಮೊದಲು ತೊಟ್ಟು ವಿಷ ಕೊಟ್ಟಬಿಡಿ. ರಾಮನಗರದಲ್ಲಿ ಜೆಡಿಎಸ್ ಪಕ್ಷದ ಸೋಲು ನನ್ನ ಹಾಗೂ ಪಕ್ಷದ ಅಸ್ತಿತ್ವದ ಪ್ರಶ್ನೆ. ಜೆಡಿಎಸ್ ಕಾರ್ಯಕರ್ತರಾಗಿರುವ ನೀವೇ ಪಕ್ಷದ ಅಭ್ಯರ್ಥಿಯ ಬಗ್ಗೆ ಅಪಪ್ರಚಾರ ಮಾಡಿಕೊಂಡು ತಿರುಗಾಡಿದರೆ ಹೇಗೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು. ಈ ಸಂದರ್ಭದಲ್ಲಿ ಅವರ ಕಣ್ಣಿಂದ ವರ್ಷಧಾರೆ ದುಮ್ಮಿಕ್ಕತೊಡಗಿದವು.
ಆಗ ಪಕ್ಷದ ಕಾರ್ಯಕರ್ತರು ಕುಮಾರಸ್ವಾಮಿ ಅವರನ್ನು ಸಮಾಧಾನಪಡಿಸಲು ಮುಂದಾದರೂ, ಮತ್ತೆ ಕೆಲವರು ಜೆಡಿಎಸ್ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುತ್ತೇವೆ ಎಂದರು. ರಾಮನಗರದ ನಿಮಗಷ್ಟೆ ಅಲ್ಲ, ನಮಗೂ ದೊಡ್ಡ ಪ್ರಶ್ನೆಯಾಗಿದೆ. ಈ ಕ್ಷೇತ್ರದಲ್ಲಿ ಜೆಡಿಎಸ್ ಗೆಲ್ಲಿಸುವುದು ನಮ್ಮ ಏಕೈಕ ಗುರಿ. ಯಾವ ಕಾರಣಕ್ಕೂ ನೀವು ಭಯಬೀತರಾಗಬೇಡಿ ಎಂದು ನೆರದಿದ್ದ ಕಾರ್ಯಕರ್ತರ ಸಮೂಹ ಕುಮಾರಸ್ವಾಮಿ ಅವರಿಗೆ ಮಾತು ನೀಡಿತು. ಆದರೂ ಕೂಡಾ ಕುಮಾರಸ್ವಾಮಿ ಅವರ ಕಣ್ಣೀರು ಮಾತ್ರ ಹರಿಯುತ್ತಲೇ ಇತ್ತು.
ಮತದಾರರನ್ನು ಮರಳು ಮಾಡುವುದರಲ್ಲಿ ಗೌಡರ ಕುಟುಂಬ ಎತ್ತಿದ ಕೈ ಎಂಬ ಆರೋಪವಿದೆ. ಮಾಜಿ ಪ್ರಧಾನಿ ದೇವೇಗೌಡರು ಕೂಡಾ ಸಂದಿಗ್ಧ ಕಾಲದಲ್ಲಿ ಮತದಾರರ ಮನಸೆಳೆಯಲು ವಿಶಿಷ್ಟ ತಂತ್ರಗಾರಿಕೆಯನ್ನು ರೂಪಿಸುತ್ತಿದ್ದರು. ಅದನ್ನೇ ಕುಮಾರಸ್ವಾಮಿ ಅವರು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ರಾಮನಗರ ಕುಮಾರಸ್ವಾಮಿ ಅವರ ಕರ್ಮಭೂಮಿ. ಅಲ್ಲದೇ ಈ ಕ್ಷೇತ್ರದಿಂದ ಆಯ್ಕೆಯಾಗಿದ್ದ ಅವರ ರಾಜ್ಯ ಮುಖ್ಯಮಂತ್ರಿಯಾದರು. ನಂತರ ರಾಮನಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಪರಿವರ್ತಿಸಿದರು. ಅನೇರ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಹೀಗಿದ್ದಾಗ ಈ ಕ್ಷೇತ್ರದಲ್ಲಿ ಆಕಸ್ಮಿಕವಾಗಿ ಪಕ್ಷ ಸೋಲುಂಡರೆ ರಾಜಕೀಯ ಜೀವನದ ಮೇಲೆ ಪರಿಣಾಮ ಬೀರಲಿದೆ ಎನ್ನುವುದು ಕುಮಾರಸ್ವಾಮಿ ಅವಕ ಆತಂಕ ಇರಬಹುದು.
(ದಟ್ಸ್ ಕನ್ನಡ ವಾರ್ತೆ)
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications