ಕರ್ನಾಟಕಕ್ಕೆ ನಾಲ್ಕು ರಾಷ್ಟ್ರೀಯ ಜಲಪ್ರಶಸ್ತಿಯ ಹಿರಿಮೆ
ಬೆಂಗಳೂರು, ಆ. 15 : ಕರ್ನಾಟಕ ನಗರಾಭಿವೃದ್ಧಿ ಇಲಾಖೆಯ ಅಂಗಸಂಸ್ಥೆಗಳು ರಾಷ್ಟ್ರೀಯ ಮಟ್ಟದಲ್ಲಿ ನೀಡಲಾಗುವ ಅತ್ಯಂತ ಪ್ರತಿಷ್ಠಿತವಾದ ನಾಲ್ಕು "ರಾಷ್ಟ್ರೀಯ ನಗರ ನೀರು ಪುರಸ್ಕಾರ" ಪ್ರಶಸ್ತಿಗಳನ್ನು ಪಡೆದಿವೆ. ಇದು ಕರ್ನಾಟಕದಲ್ಲಿ ನಗರಾಭಿವೃದ್ಧಿ ಇಲಾಖೆಯ ಸಾಧನೆಗಳು ರಾಷ್ಟ್ರೀಯ ಮಟ್ಟದಲ್ಲಿ ಪಡೆಯುತ್ತಿರುವ ಅಸಾಮಾನ್ಯ ಮನ್ನಣೆಗೆ ಸಾಕ್ಷಿಯಾಗಿದೆ.
ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಸಂಸ್ಥೆ (ಕೆ.ಯು.ಐ.ಡಿ.ಎಫ್.ಸಿ) ಮತ್ತು ಬೆಂಗಳೂರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿ.ಡಬ್ಲ್ಯು.ಎಸ್.ಎಸ್.ಬಿ) ಹಾಗೂ ಕುಂದಾಪುರ ಪುರಸಭೆ ಮತ್ತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗಳು ತಮ್ಮ ಅಸಾಮಾನ್ಯ ಸಾಧನೆಗಾಗಿ ಈ ಪ್ರಶಸ್ತಿಗಳಿಗೆ ಭಾಜನವಾಗಿವೆ.
2008 ನೇ ಸಾಲಿನಿಂದ ಭಾರತ ಸರ್ಕಾರದ ನಗರಾಭಿವೃದ್ಧಿ ಇಲಾಖೆ, ಭಾರತೀಯ ಆಡಳಿತ ಸಿಬ್ಬಂದಿ ಕಾಲೇಜು, ಹೈದರಾಬಾದ್ ಮತ್ತು ಕಾನ್ಫಿಡರೇಷನ್ ಆಫ್ ಇಂಡಿಯನ್ ಇಂಡಸ್ಟ್ರೀಸ್ ಇವುಗಳ ಸಹಯೋಗದೊಂದಿಗೆ ರಾಷ್ಟ್ರೀಯ ನಗರ ನೀರು ಪ್ರಶಸ್ತಿಗಳನ್ನು ನೀಡುತ್ತಿದ್ದು, ನಿನ್ನೆ ದೆಹಲಿಯ ವಿಜ್ಞಾನ ಭವನದಲ್ಲಿ 2009 ನೇ ಸಾಲಿನ ಪ್ರಶಸ್ತಿಗಳನ್ನು ಘೋಷಿಸಿತು. 6 ವಿಭಾಗಗಳಲ್ಲಿ ನೀಡಲಾಗುವ ಈ ಪ್ರಶಸ್ತಿಗಳಲ್ಲಿ 4 ಪ್ರಶಸ್ತಿ ಕರ್ನಾಟಕದ ಪಾಲಾಯಿತು. ವಿವಿಧ ರಾಜ್ಯಗಳ 90 ಸಂಸ್ಥೆಗಳು ಈ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದವು. ಇಂತಹ ಅತ್ಯಂತ ಪೈಪೋಟಿಯ ನಡುವೆ ಕರ್ನಾಟಕ ನಾಲ್ಕು ಪ್ರಶಸ್ತಿಗಳನ್ನು ಬಾಚಿಕೊಂಡಿದ್ದು ಅಸಾಧಾರಣ ಸಾಧನೆಯಾಗಿದೆ.
(ದಟ್ಸ್ ಕನ್ನಡ ವಾರ್ತೆ)
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications