ನೇಗಿಲ ಯೋಗಿ ಹಾಡು ರೈತಗೀತೆಯಾದ ಸಂದರ್ಭ

ರಾಷ್ಟ್ರೀಯ ಹಬ್ಬ, ನಾಡಹಬ್ಬಗಳ ಸಂದರ್ಭ ನೇಗಿಲ ಯೋಗಿ ಗೀತೆ ಹಾಡಬೇಕು. ಈಗಾಗಲೇ ರಾಜ್ಯ ಸರ್ಕಾರ ಆದೇಶ ಕೂಡ ಹೊರಡಿಸಿದೆ. ಈ ಮೂಲಕ ರೈತನನ್ನು ನೆನೆಪಿಸಿಕೊಳ್ಳುವ ಗೀತೆಯೊಂದು ಏಕರೂಪದಲ್ಲಿ ಪ್ರಸ್ತುತಗೊಂಡಿತು.
ಕಾರ್ಗಿಲ್ ಯೋಧರಿಗೆ ಆರ್ಥಿಕ ಸಹಾಯ : ಸ್ವಾತಂತ್ರ್ಯ ದಿನಾಚರಣೆ ಮಹತ್ವದ ಗಳಿಗೆಯಲ್ಲಿ ಕಾರ್ಗಿಲ್ ಸೇರಿದಂತೆ ದೇಶಕ್ಕಾಗಿ ವೀರಮರಣ ಹೊಂದಿದ ಯೋಧರ ಹಾಗೂ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಸ್ವಾತಂತ್ರ ಯೋಧರಿಗೆ ವಿವಿಧ ಸೌಲಭ್ಯ ಹಾಗೂ ಆರ್ಥಿಕ ಸಹಾಯ ನೀಡುವ ಭರವಸೆ ನೀಡಿದೆ. ನಗರದ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಮೈದಾನದಲ್ಲಿ ಗೌರವ ವಂದನೆ ಸ್ವೀಕರಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, 63ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು
ನಂತರ ಮಾತನಾಡಿದ ಅವರು, ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರ 16 ವೀರ ಯೋಧರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಈ ಸಂದರ್ಭದಲ್ಲಿ ಘೋಷಿಸಿದರು. ಅಲ್ಲದೆ, ಕಾರ್ಗಿಲ್ನಲ್ಲಿ ಮಡಿದ ಹುತಾತ್ಮರ ಸ್ಮರಣಾರ್ಥವಾಗಿ ಬೆಂಗಳೂರಿನಲ್ಲಿ ಸ್ಮಾರಕ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದರು. ಸ್ವಾತಂತ್ರ್ಯ ಸಂಗ್ರಾಮದ ನೆಲೆಗಳ ಅಭಿವೃದ್ಧಿಗಾಗಿ 10ಕೋಟಿ ರೂಪಾಯಿ ವ್ಯಯಿಸಲಾಗುವುದು ಎಂದು ಹೇಳಿದರು.
ಸ್ವಾತಂತ್ರ್ಯ ಹೋರಾಟಗಾರರ ಪಿಂಚಣಿಯನ್ನು ಏರಿಕೆ ಮಾಡಲಾಗಿದ್ದು, ಗೋವಾ ಚಳವಳಿಗಾರರಿಗೆ ಒಂದು ಸಾವಿರದಿಂದ ಎರಡು ಸಾವಿರ ರೂಪಾಯಿಗೆ ಪಿಂಚಣಿ, ಉದ್ಯೋಗ ಯೋಜನೆಗೆ ಒತ್ತು ನೀಡಲಾಗುವುದು ಎಂದು ಅವರು ಹೇಳಿದರು. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಎಲ್ ಮಹನೀಯರ ಬಗ್ಗೆ ರಾಜ್ಯ ಎಚ್ಚರಿಕೆ ಕಾರ್ಯಕ್ರಮಗಳು ಅಗತ್ಯವಾಗಿದೆ ಎಂದು ಯಡಿಯೂರಪ್ಪ ಹೇಳಿದರು. ಸ್ವಾತಂತ್ರ್ಯ ಯೋಧರ ಸವಿನೆಪಿಗೆ ಪ್ರತಿ ಜಿಲ್ಲೆಯಲ್ಲೂ ಮೆಮೋರಿಯಲ್ ಗಳನ್ನು ನಿರ್ಮಿಸಲು 10 ಕೋಟಿ ರುಪಾಯಿಗಳನ್ನು ಬಜೆಟ್ ನಲ್ಲಿ ತೆಗೆದಿರಿಸಲಾಗಿದೆ ಎಂದು ಹೇಳಿದರು.
ಮಾಣಿಕ್ ಶಾ ಫೆರೆಡ್ ಮೈದಾನದಲ್ಲಿ 300 ಶಾಲಾ ಮಕ್ಕಳು ಭಾಗವಹಿಸಿದ್ದರು. ಸಚಿವರು, ಹಿರಿಯ ಅಧಿಕಾರಿಗಳು ಸೇರಿ ಸುಮಾರು 10 ಸಾವಿರಕ್ಕೂ ಹೆಚ್ಚು ಜನರು 63 ಸ್ವಾತಂತ್ರ್ಯ ದಿನಾಚರಣೆಯ ಭವ್ಯವಾದ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಮುಂಜಾಗ್ರತಾ ಕ್ರಮವಾಗಿ ಮೈದಾನದ ಸುತ್ತ ಭಾರಿ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿತ್ತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications