ರಾಜ್ಯದಲ್ಲಿ ಎಚ್1ಎನ್1ಗೆ ಮತ್ತೆರಡು ಬಲಿ

ನಾಗರಬಾವಿ ನಿವಾಸಿ ಶಿವಣ್ಣ (56) ಎಚ್1ಎನ್1 ಸೋಂಕಿಗೆ ಬಲಿಯಾಗಿರುವ ಎರಡನೇ ವ್ಯಕ್ತಿಯಾಗಿದ್ದಾರೆ. ಮಧುಮೇಹ ಮತ್ತು ಹೃದಯರೋಗದಿಂದ ಬಳಲುತ್ತಿದ್ದ ಶಿವಣ್ಣ ಅವರನ್ನು ಕಳೆದ 12 ರಂದು ರಾಜಾಜಿನಗರದ ವೊಕ್ಹಾರ್ಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಉಸಿರಾಟದ ತೊಂದರೆ ತೀವ್ರಗೊಂಡ ಹಿನ್ನೆಲೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು. ರೋಗಿಯ ಗಂಟಲಿನಲ್ಲಿರುವ ದ್ರವ್ಯ ಸಂಗ್ರಹಿಸಿ ನಿಮ್ಹಾನ್ಸ್ ಆಸ್ಪತ್ರೆಗೆ ಕಳುಹಿಸಲಾಗಿತ್ತು. ರೋಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಶುಕ್ರವಾರ ಸಂಜೆ ನಿಮ್ಹಾನ್ಸ್ ಆಸ್ಪತ್ರೆಯಿಂದ ವರದಿ ಬಂದಿದ್ದು, ಎಚ್1ಎನ್1 ಸೋಂಕಿನಿಂದಲೇ ಶಿವಣ್ಣ ಸಾವನ್ನಪ್ಪಿದ್ದಾರೆ ಎನ್ನುವುದು ದೃಢಪಟ್ಟಿದೆ.
ಅಲ್ಲದೇ ನಗರದ ಬೊಮ್ಮಸಂದ್ರದ ಮಂಜುನಾಥ ಎಂಬ 28 ವರ್ಷದ ವ್ಯಕ್ತಿ ಎಚ್1 ಎನ್ 1 ಸೋಂಕಿನಿಂದ ಮೃತಪಟ್ಟಿದ್ದಾರೆ. ಜ್ವರ, ಕೆಮ್ಮು, ನೆಗಡಿ ಹಾಗೂ ವಾತಿ ಬೇದಿಯಿಂದ ಗುರುವಾರ ವೈಟ್ ಫೀಲ್ಡ್ ನಲ್ಲಿರುವ ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಸಂಜೆ ಮಂಜುನಾಥ ಮೃತಪಟಿದ್ದಾರೆ. ಅವರ ರಕ್ತದ ಮಾದರಿಯನ್ನು ನಿಮ್ಹಾನ್ಸ್ ಕಳುಹಿಸಲಾಗಿದ್ದು, ಎಚ್ 1ಎನ್ 1 ಸೋಂಕಿನಿಂದಲೇ ಸಾವನ್ನಪ್ಪಿದರುವುದಾಗಿ ಸ್ಪಷ್ಟವಾಗಿದೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications