ದೇವೇಗೌಡರ ಭಯೋತ್ಪಾದಕರ ತಂಡ ನಾಶ

ಇದಕ್ಕೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ದೇವೇಗೌಡರನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ. ಅವರ ರಾಜಕೀಯ ಜೀವನದಲ್ಲಿ ಇಂತಹ ನೊರೆಂಟು ಸದಾನಂದಗೌಡರನ್ನು ಮನೆಗೆ ಕಳುಹಿಸಿದ್ದಾರೆ ಎಂದು ಉತ್ತರಿಸಿದ್ದಾರೆ. ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಬಿಜೆಪಿ ಪರ ಪ್ರಚಾರ ಕಾರ್ಯ ಮುಗಿಸಿ ತೆರಳುತ್ತಿದ್ದ ಸಮಯದಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಕಟ್ಟಾ ಸುಬ್ರಮಣ್. ನಾಯ್ಡು ಮತ್ತು ಶಾಸಕ ಮುನಿರಾಜು ಅವರ ಮೇಲೆ ಭಾನುವಾರ ಸಂಜೆ ನಡೆಸಿರುವ ದಾಳಿಯನ್ನು ಸದಾನಂದಗೌಡ ತೀವ್ರವಾಗಿ ಖಂಡಿಸಿದ್ದಾರೆ.
ರಾಮನಗರ ಮತ್ತು ಚನ್ನಪಟ್ಟಣದಲ್ಲಿ ಜೆಡಿಎಸ್ ಸೋಲಿನ ಭೀತಿ ಎದುರಿಸುತ್ತಿದೆ. ಆ ಪಕ್ಷದ ನಾಯಕರಿಗೆ ಅಸ್ತಿತ್ವದ ಪ್ರಶ್ನೆಯಾಗಿ ಕಾಡತೊಡಗಿದೆ. ದೇವೇಗೌಡ ಭಯೋತ್ಪಾದಕರ ತಂಡದ ಹುಟ್ಟಡಗಿಸುವುದೇ ಬಿಜೆಪಿ ಏಕೈಕ ಗುರಿ. ಅದರಲ್ಲಿ ನಾವು ಸಫಲರಾಗುತ್ತೇವೆ. ಈ ಚುನಾವಣೆಯಲ್ಲಿ ಜೆಡಿಎಸ್ ಸೋಲಿಸುವ ಮೂಲರ ಈ ಪಕ್ಷದ ಹಣೆಬರಹವನ್ನು ಬರೆಯುತ್ತೇವೆ ಎಂದು ಗೌಡ ಕಿಡಿಕಾರಿದರು.
ಸದಾನಂದಗೌರ ಟೀಕೆಗೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ದೇವೇಗೌಡರನ್ನು ಮನೆಗೆ ಕಳುಹಿಸುತ್ತೇವೆ. ಹಾಗೇ ಮಾಡುತ್ತೇವೆ, ಹೀಗೆ ಮಾಡುತ್ತೇವೆ ಎಂದವರೆಲ್ಲ ಮೂಲೇ ಸೇರಿಕೊಂಡಿದ್ದಾರೆ. ಅವರ ರಾಜಕೀಯ 50 ವರ್ಷಗಳಲ್ಲಿ ಇಂತಹ ಅನೇಕ ಸದಾನಂದಗೌಡರನ್ನು ನೋಡಿದ್ದಾರೆ. ದೇವೇಗೌಡರನ್ನು ಅಲುಗಾಡಿಸುವುದು ಸದಾನಂದಗೌಡ ಅವರ ಪಕ್ಷ ಬಿಜೆಪಿಗೂ ಸಾಧ್ಯವಿಲ್ಲ ಎಂದಿದ್ದಾರೆ. ಭಾನುವಾರ ಸಚಿವ ಕಟ್ಟಾ ಸುಬ್ರಮಣ್ಯ ಮತ್ತು ಶಾಸಕ ಮುನಿರಾಜು ಅವರಿಗೆ ಘೇರಾವೂ ಹಾಕಿದ ಜೆಡಿಎಸ್ ಕಾರ್ಯಕರ್ತರು, ಸಚಿವ ಕಟ್ಟಾ ಅವರಿಗೆ ಕಪಾಲಮೊಕ್ಷ ಮಾಡಿದ ಪ್ರಸಂಗವೂ ನಡೆದಿದೆ ಎನ್ನಲಾಗಿದೆ. ಇದಕ್ಕೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications