ಉಪಚುನಾವಣೆ : ಶೇ. 60 ರಷ್ಟು ಮತದಾನ

ರಾಮನಗರ ಶೇ. 66, ಚನ್ನಪಟ್ಟಣದಲ್ಲಿ ಶೇ. 70 ರಷ್ಟು, ಕೊಳ್ಳೇಗಾಲದಲ್ಲಿ ಶೇ.62 ರಷ್ಟು, ಚಿತ್ತಾಪುರದಲ್ಲಿ ಶೇ. 60 ರಷ್ಟು ಹಾಗೂ ಗೋವಿಂದರಾಜ ನಗರದಲ್ಲಿ ಶೇ. 45 ರಷ್ಟು ಮತದಾನವಾಗಿದೆ. ಚಿತ್ತಾಪುರ ಹಾಗೂ ಬೆಂಗಳೂರಿನ ಗೋವಿಂದರಾಜ ನಗರದಲ್ಲಿ ಆರಂಭದಲ್ಲಿ ಜನರಿಂದ ನೀರಸ ಪ್ರತಿಕ್ರಿಯೆ ಬಂದಿದ್ದು, ನಂತರ ಬಿರುಸುಗೊಂಡಿತು.
ಚನ್ನಪಟ್ಟಣದಲ್ಲಿ ಕಳ್ಳಿಹೊಸೂರು ಗ್ರಾಮದಲ್ಲಿ ಮತದಾನಕ್ಕೆ ಆಗಮಿಸಿದ್ದ ಮಾಜಿ ಸಚಿವ ಎಂ ವರದೇಗೌಡರ ಸಂಬಂಧಿ ಕೋಮಲಮ್ಮ (80) ಎಂಬುವವರಿಗೆ ತೀವ್ರ ಹೃದಯಘಾತವಾಗಿದ್ದರಿಂದ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ವರದಿಯಾಗಿದೆ. ಇದರಿಂದ ಮತದಾನ ಕೆಲ ಕಾಲ ಸ್ಥಗಿತಗೊಂಡಿತ್ತು. ಉಳಿದಂತೆ ಚನ್ನಪಟ್ಟಣದಲ್ಲಿ ಶಾಂತಿಯುತವಾಗಿ ಬಿರುಸಿನಿಂದ ಮತದಾನ ಸಾಗಿತು.
ರಾಮನಗರದಲ್ಲಿ ಆರಂಭದಿಂದಲೇ ಬಿರುಸಿನಿಂದ ಮತದಾನ ಶುರುವಾಯಿತು. ಆದರೆ, ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುವ ಸಿದ್ದಯ್ಯದೊಡ್ಡಿ ಗ್ರಾಮದ ಜನರು ಮತದಾನಕ್ಕೆ ಬಹಿಷ್ಕಾರ ಹಾಕಿರುವ ಘಟನೆ ನಡೆದಿದೆ. ಕನಕಪುರ ಕ್ಷೇತ್ರದಿಂದ ರಾಮನಗರ ವಿಧಾನಸಭೆ ಕ್ಷೇತ್ರಕ್ಕೆ ಸೇರಿರುವ ಸಿದ್ದಯ್ಯದೊಡ್ಡಿ ಗ್ರಾಮಕ್ಕೆ ಸರಿಯಾದ ರಸ್ತೆ, ವಿದ್ಯುತ್ ಸಂಪರ್ಕ, ಬಸ್ ವ್ಯವಸ್ಥೆ ಇಲ್ಲ ಎಂಬ ಆರೋಪದ ಮೇರೆಗೆ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದಾರೆ.
ಕೊಳ್ಳೇಗಾಲದ ಮತಗಟ್ಟೆಯೊಂದರಲ್ಲಿ ಮತಯಂತ್ರ ಕೈಕೊಟ್ಟಿದ್ದರಿಂದ ಮತದಾನಕ್ಕೆ ಅಡ್ಡಿ, ತಕ್ಷಣ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ದೋಷ ಸರಿಪಡಿಸಿ ಮತದಾನಕ್ಕೆ ಅನುವು ಮಾಡಿಕೊಟ್ಟರು. ಗೋವಿಂದರಾಜ ನಗರ ಕ್ಷೇತ್ರದಲ್ಲಿ ಮತದಾರರ ಹೆಸರು ಪಟ್ಟಿಯಲ್ಲಿ ಇಲ್ಲದ ಕಾರಣ ಅನೇಕರು ಮತದಾನದಿಂದ ವಂಚಿತರಾಗಬೇಕಾಯಿತು. ಪಟ್ಟೇಗಾರಪಾಳ್ಯದ ಅನೇಕ ಮತದಾರರು ವಾಪಸ್ ತೆರಳಿದರು. ಸ್ಥಳಕ್ಕೆ ಆಗಮಿಸಿದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಕೃಷ್ಣ ಅವರು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ನಂತರ ಪ್ರತಿಕ್ರಿಯೆ ನೀಡಿದ ಪ್ರಿಯಾಕೃಷ್ಣ, ರಾಜ್ಯ ಆಡಳಿತರೂಢ ಸರಕಾರ ಅಧಿಕಾರಯಂತ್ರವನ್ನು ಸಂಪೂರ್ಣ ದುರುಪಯೋಗಪಡಿಸಿಕೊಂಡಿದೆ. ಪೊಲೀಸರು, ಮತಗಟ್ಟೆ ಅಧಿಕಾರಿಗಳು ಸಹಕರಿಸುತ್ತಿಲ್ಲ. ಪಟ್ಟೆಗಾರಪಾಳ್ಯದಲ್ಲಿ ವಾಸಿಸುವವರು ಅಲ್ಪಸಂಖ್ಯಾತರು, ಆದರೆ, ಅಲ್ಲಿನವರಿಗೆ ಹೆಸರುಗಳು ಮತಪಟ್ಟಿಯಲ್ಲಿ ಇಲ್ಲ. ಪೊಲೀಸರು ಕೂಡಾ ಬಂದಿರುವ ಅನೇಕ ಜನರನ್ನು ವಾಪಸ್ಸು ಕಳುಹಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಮುಂಬೈನಿಂದ ಐಷಾರಾಮಿ ಬಸ್ ಮೂಲಕ ನಕಲಿ ಮತದಾನಕ್ಕೆ ಬಂದಿದ್ದ ನೂರಾರು ಜನರನ್ನು ವಾಡಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಇದು ಬಿಜೆಪಿ ಕೃಪಾಪೋಷಿತ ನಕಲಿ ಪಡೆ. ಇಂತಹ ಘಟನೆಗಳು ಕ್ಷೇತ್ರದ ಬೇರೆ ಬೇರೆ ಕಡೆಗಳಲ್ಲಿ ನಡೆದಿರುವ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಖರ್ಗೆ ಆರೋಪಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications