ಸಿಎಂ ಆಪ್ತರಿಂದ ಅಕ್ರಮ ತೊಗರಿ ದಾಸ್ತಾನು, ರೇವಣ್ಣ
ಬೆಂಗಳೂರು,
ಆ. 18 : ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಪ್ತ ಐದಾರು ಮಂದಿ ವರ್ತಕರು ಗುಲ್ಬರ್ಗಾ ಜಿಲ್ಲೆಯಲ್ಲಿ 4 ರಿಂದ 5 ಲಕ್ಷ ಕ್ವಿಂಟಾಲ್ ತೊಗರಿಬೇಳೆ ಅಕ್ರಮ ದಾಸ್ತಾನು ಮಾಡಿದ್ದಾರೆ. ರೈತರಿಂದ ಪ್ರತಿ ಕೆಜಿಗೆ 50 ರೂಪಾಯಿಗೆ ಖರೀದಿಸಿ ಉಗ್ರಾಣದಲ್ಲಿ ಅಕ್ರಮವಾಗಿ ಶೇಖರಿಸಿಡಲಾಗಿದೆ. ಇದರಿಂದ ಬೇಳೆ ಬೆಲೆ ಗಗನಕ್ಕೇರಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ದೂರಿದ್ದಾರೆ. id="toptextpromo">ಇತ್ತೀಚಿಗೆ
ಅಕ್ರಮ ದಾಸ್ತಾನು ಪತ್ತೆ ಹಚ್ಚಿದ ಗುಲ್ಬರ್ಗಾದ ಆಹಾರ ಇಲಾಖೆ ಅಧಿಕಾರಿಯೊಬ್ಬರನ್ನು ಸರಕಾರ ವರ್ಗಾವಣೆ ಮಾಡಿದೆ. ಒಳ್ಳೆಯ ಕೆಲಸ ಮಾಡುವ ಅಧಿಕಾರಿಗಳಿಗೆ ಈ ರೀತಿಯ ಶಿಕ್ಷೆ ನೀಡುವುದು ಎಷ್ಟರ ಮಟ್ಟಿಗೆ ಸರಿ. ಅಧಿಕಾರಿಗಳ ವರ್ಗಾವಣೆಯ ಹಿಂದೆ ಮುಖ್ಯಮಂತ್ರಿ ಆಪ್ತರ ಕೈವಾಡವಿದೆ. ಬೆಲೆ ಏರಿಕೆಗೆ ಕಾರಣವಾಗಿರುವ ವರ್ತಕರ ವಿರುದ್ದ ಕ್ರಮ ಜರುಗಿಸಬೇಕೆಂದು ರೇವಣ್ಣ ಒತ್ತಾಯಿಸಿದ್ದಾರೆ. id='are-slot-1' class='oiad oi-axt oiadv'> id='top-searched-articles'>(ದಟ್ಸ್
ಕನ್ನಡ ವಾರ್ತೆ)











Click it and Unblock the Notifications