ಮುಖ್ಯಮಂತ್ರಿಗಳೆ ಬರಕ್ಕೆ ಭಯಬೀಳಬೇಡಿ : ಪಿಎಂ

Manmohan Singh
ನವದೆಹಲಿ, ಆ. 18 : ಬರಗಾಲ ದೇಶಕ್ಕೆ ಎದುರಾಗಿರುವ ದೊಡ್ಡ ಸವಾಲು ನಾವೆಲ್ಲರೂ ಸೇರಿಕೊಂಡು ನೈಸರ್ಗಿಕ ವಿಕೋಪವನ್ನು ನಿಭಾಯಿಸೋಣ. ಇದಕ್ಕೆ ಭಯಬೀಳುವ ಅಗತ್ಯವಿಲ್ಲ ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಹೇಳಿದರು.

ಬರಗಾಲವನ್ನು ಎದುರಿಸುವ ನಿಟ್ಟಿನಲ್ಲಿ ಎಲ್ಲರೂ ಕೆಲಸ ಮಾಡೋಣ, ಇದಕ್ಕೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಕೇಂದ್ರ ಸರಕಾರದೊಂದಿಗೆ ಕೈಜೋಡಿಸಿ ಎಂದು ಮನವಿ ಮಾಡಿಕೊಂಡರು. ಆಂತರಿಕ ಭದ್ರತೆಗೆ ಸಂಬಂಧಿಸಿದಂತೆ ಎರಡು ದಿನಗಳ ಸಭೆ ಇಂದು ವಿವಿಝ ರಾಜ್ಯಗಳ ಪರಿಸರ ಖಾತೆ ಸಚಿವರೊಂದಿಗೆ ಬರಗಾಲದ ಕುರಿತು ಸುದೀರ್ಘ ಚರ್ಚೆ ನಡೆಯಿತು.

ಬರಗಾಲದಿಂದ ಆಹಾರ ಕೊರತೆ ಉಂಟಾಗುವ ಸಾಧ್ಯತೆ ಇದೆ. ಇದರಿಂದಾಗಿ ಕೇಂದ್ರ ಸರಕಾರ ಅಗತ್ಯ ಪ್ರಮಾಣದ ಗೋಧಿ ಮತ್ತು ಅಕ್ಕಿಯನ್ನು ಶೇಖರಣೆ ಮಾಡಿಕೊಳ್ಳಲಾಗಿದೆ. ಬರಗಾಲ ಭಾರತಕ್ಕೆ ಹೊಸದೇನಲ್ಲ. ಈಗಾಗಲೇ ಸಾಕಷ್ಟು ಬಾರಿ ಮಳೆ ಕೊರತೆಯನ್ನು ಎದುರಿಸಿದ್ದೇವೆ. ಸಮರ್ಥವಾಗಿ ಎದುರಿಸಿದ್ದೇವೆ. ಈಗಲೂ ಅಷ್ಟೆ ಎಲ್ಲರೂ ಒಂದಾಗಿ ಇದನ್ನು ಎದುರಿಸೋಣ. ಕೇಂದ್ರ ಸರಕಾರ ಅಗತ್ಯ ಸಹಾಯ ಸಹಕಾರಕ್ಕೆ ಸಿದ್ದ. ಜೊತೆಗೆ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಇನ್ನಷ್ಟು ಪರಿಣಾಮಕಾರಿ ಜಾರಿಗೊಳಿಸಲಾದಗುವುದು ಎಂದು ಸಿಂಗ್ ವಿವರಿಸಿದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+