ಸ್ಕಾರ್ಫ್ ಧರಿಸಲು ಅನುಮತಿ ಕೊಡಿ : ಆಸ್ಮಿನ್

ವೆಂಕಟರಮಣಸ್ವಾಮಿ ಕಾಲೇಜಿನ ಬಿಕಾಂ ತರಗತಿಯಲ್ಲಿ ಕೇವಲ ಇಬ್ಬರು ಮಾತ್ರ ಮುಸ್ಲಿಂ ಹೆಣ್ಣುಮಕ್ಕಳಿದ್ದಾರೆ. ಆದರಲ್ಲಿ ಒಬ್ಬರು ಕಾಲೇಜಿನ ನಿಯಮಕ್ಕೆ ಸಮ್ಮತಿಸಿದರೆ, ಆಯೇಷಾ ಆಸ್ಮಿನ್ ಎನ್ನುವ ವಿದ್ಯಾರ್ಥಿನಿ ಮಾತ್ರ, ತಾನು ಬುರ್ಕಾ ಹಾಕದೇ ತರಗತಿಗೆ ಹಾಜರಾಗಲು ಸ್ಪಷ್ಟವಾಗಿ ನಿರಾಕರಿಸಿದ್ದಾಳೆ. ಆಸ್ಮಿನ್ ನಿಲುವಿಗೆ ಆಕೆ ಪೋಷಕರು ಹಾಗೂ ಜಿಲ್ಲೆಯ ಕೆಲ ಮುಸ್ಲಿಂ ಸಂಘಟನೆಗಳು ಬೆಂಬಲಕ್ಕೆ ನಿಂತಿರುವುದರಿಂದ ಬುರ್ಕಾ ಮತ್ತು ಸ್ಕಾರ್ಫ್ ನಿಷೇಧ ಇನ್ನಷ್ಟು ಕಗ್ಗಂಟಾಗಿ ಪರಿಣಮಿಸಿದೆ.
ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮೊದಲನೇ ವರ್ಷದ ಬಿಕಾಂ ವಿದ್ಯಾರ್ಥಿನಿ ಆಯೇಷಾ ಅಸ್ಮಿನ್, ಕಾಲೇಜಿನ ಅಡಳಿತ ಮಂಡಳಿ ವಿನಾಕಾರಣ ನಮಗೆ ತೊಂದರೆ ನೀಡುತ್ತಿದೆ. ಬುರ್ಕಾ ಅಥವಾ ಸ್ಕಾರ್ಫ್ ಧರಿಸಿಯೇ ನಾನು ಕಾಲೇಜಿಗೆ ಹೋಗುವೆ. ನನ್ನ ಧರ್ಮದ ಪ್ರಕಾರ ನಾನು ನಡೆದುಕೊಳ್ಳುತ್ತಿರುವೆ ಎಂದು ವಾದಿಸುತ್ತಿದ್ದಾಳೆ.
ಆರಂಭದಲ್ಲಿ ಎಲ್ಲವೂ ಸರಿಯಾಗಿಯೇ ಇತ್ತು. ನಂತರ ಕಾಲೇಜಿನಲ್ಲಿ ಚುನಾವಣೆಗಳು ಆರಂಭವಾದವು. ಬಿಕಾಂ ಅಂತಿಮ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಭರತ್ ಎಂಬ ವಿದ್ಯಾರ್ಥಿ ಅಧ್ಯಕ್ಷನಾಗಿ ಆಯ್ಕೆಯಾದ ಮೇಲೆ ಆಲ್ಲಿಂದ ಈ ಸಮಸ್ಯೆ ಆರಂಭವಾಗಿದೆ. ಕಾಲೇಜಿಗೆ ಬುರ್ಕಾ ಅಥವಾ ಸ್ಕಾರ್ಫ್ ಧರಿಸಿ ಬರಬಹುದು. ಆದರೆ, ತರಗತಿಯಲ್ಲಿ ಮಾತ್ರ ಮುಖವಾಡ ಧರಿಸುವ ಹಾಗಿಲ್ಲ. ಮುಖ ಮುಚ್ಚಿಕೊಂಡು ತರಗತಿಯಲ್ಲಿ ಹಾಜರಾಗುವುದು ಅನೇಕ ಸಮಸ್ಯೆಗಳಿಗೆ ಎಡೆಮಾಡಿಕೊಡುತ್ತದೆ ಎಂದು ನನಗೆ ಭರತ್ ಎಚ್ಚರಿಕೆ ನೀಡಿದ. ನಂತರ ಕೆಲವೇ ದಿನಗಳಲ್ಲಿ ಕಾಲೇಜಿನ ಆಡಳಿತ ಮಂಡಳಿ ಬುರ್ಕಾ ಅಥವಾ ಸ್ಕಾರ್ಫ್ ನಿಷೇಧವನ್ನು ಅಧಿಕೃತಗೊಳಿಸಿತು ಎಂದು ಹೇಳಿದ್ದಾರೆ.
ನಾನು ಚಾರ್ಟರ್ಡ್ ಆಕೌಟೆಂಟ್ ಆಗಬೇಕು ಎಂಬ ಕನಸಿದೆ. ಇದೇ ಕಾಲೇಜಿನಲ್ಲಿ ಶಿಕ್ಷಣ ಮುಂದುವರೆಸಬೇಕು ಎಂಬ ಆಸೆ ಇದೆ. ಆದರೆ, ನನಗೆ ಇಲ್ಲಿ ಸಮಸ್ಯೆ ತಲೆದೋರಿದೆ ಎನ್ನುವುದು ಅಯೇಷಾ ಅಳಲಾಗಿದೆ. ಆದರೆ, ಕಾಲೇಜಿನ ಆಡಳಿತ ಮಂಡಳಿ ಬುರ್ಕಾ ನಿಷೇಧ ನಿಯಮವನ್ನು ಎಲ್ಲರಿಗೂ ಅನ್ವಯವಾಗಲಿದೆ, ತಾರತಮ್ಯ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದೆ. ವಿಶ್ವವಿದ್ಯಾಲಯದ ನಿಯಮದ ಪ್ರಕಾರ ಯಾವುದೇ ಧರ್ಮದವರಾಗಲೀ ವಿದ್ಯಾರ್ಥಿಗಳು ಶಿಕ್ಷಣ ನೀತಿಗೆ ಒಳಪಡಬೇಕು. ಆದರೆ, ಆಯೇಷಾ ಮಾತ್ರ ಪಟ್ಟು ಬಿಡದಿರುವುದು ವಿವಾದವನ್ನು ಮತ್ತಷ್ಟು ಕಗ್ಗಂಟಾಗಿಸಿದೆ.
(ದಟ್ಸ್ ಕನ್ನಡ ವಾರ್ತೆ)
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications