ಬಿಜೆಪಿ ಪಾಲಿಗೆ ರಾವಣನಾದೆ : ಜಸ್ವಂತ್ ಸಿಂಗ್

ಇಲ್ಲಿ ನಡೆದಿರುವ ಬಿಜೆಪಿಯ ಚಿಂತನಾ ಬೈಠಕ್ ನಲ್ಲಿ ತಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿದ ಕ್ರಮದಿಂದ ತೀವ್ರವಾಗಿ ನೊಂದಿರುವ ಅವರು, ಇದು ನನ್ನ ರಾಜಕೀಯ ಜೀವನದ ಅತ್ಯಂತ ದುಖಃದಾಯಕ ದಿನವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಪಕ್ಷದಿಂದ ಉಚ್ಚಾಟಿಸಿರುವ ವಿಷಯವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ದೂರವಾಣಿ ಮೂಲಕ ತಿಳಿಸಿದರು. ಬಿಜೆಪಿ ನನ್ನನ್ನು ಉಚ್ಚಾಟನೆ ಮಾಡಬೇಕು ಎಂದು ತೀರ್ಮಾನ ತೆಗೆದುಕೊಂಡಿತ್ತು ಎನ್ನುವುದಾದರೆ, ನನ್ನನ್ನು ಶಿಮ್ಲಾಕ್ಕೆ ಕರೆಸಿಕೊಳ್ಳುವ ಅಗತ್ಯವೇನಿತ್ತು. ನವದೆಹಲಿಯಲ್ಲಿಯೇ ಈ ವಿಷಯ ತಿಳಿಸಬಹುದಾಗಿತ್ತು. ಆದರೆ, ಉದ್ದೇಶ ಪೂರ್ವಕವಾಗಿ ನನ್ನು ಇಲ್ಲಿಯವರೆಗೆ ಕರೆಸಿ ಉಚ್ಚಾಟಿಸಿ ಅವಮಾನ ಮಾಡುವ ಅಗತ್ಯವಿತ್ತೇ ಎಂದು ಅವರು ಪ್ರಶ್ನಿಸಿದ್ದಾರೆ.
ಭಾರತೀಯ ಸೈನ್ಯದಲ್ಲಿ ಕಾರ್ಯನಿರ್ವಹಿಸಿದೆ. ನಂತರ ಬಿಜೆಪಿ ಪಕ್ಷದೊಂದಿಗೆ ಗುರುತಿಸಿಕೊಂಡೆ. ಕಳೆದ 30 ವರ್ಷಗಳಿಂದ ಬಿಜೆಪಿಯಲ್ಲಿ ರಾಜಕೀಯ ಮಾಡಿದ ನನಗೆ, ಇಂತಹ ಶಿಕ್ಷೆಯನ್ನು ನಿರೀಕ್ಷಿಸಿರಲಿಲ್ಲ. ಆದರೆ, ಒಂದು ಮಾತಂತೂ ನಿಜ. ಬಿಜೆಪಿ ನಾಯಕರು ನಾನು ಬರೆದಿರುವ ಜಿನ್ನಾ ಇಂಡಿಯಾ ಪಾರ್ಟಿಶನ್ ಇಂಡಿಪೆಂಡೆನ್ಸ್ ಪುಸ್ತಕವನ್ನು ಪೂರ್ಣವಾಗಿ ಓದಿಲ್ಲ ಎನ್ನುವುದು ಖಚಿತವಾಗಿದೆ.
ನನ್ನ ಪುಸ್ತಕದಲ್ಲಿ ಜಿನ್ನಾ ಶ್ಲಾಘನೆ ಇರುವುದು ನಿಜ. ಅದನ್ನು ನಾನು ಈಗಲೂ ಸಮರ್ಥಿಸಿಕೊಳ್ಳಿವೆ. ನೆಹರು ಮತ್ತು ಪಟೇಲ್ ಬಗ್ಗೆ ನಾನು ಮಾಡಿದ ಆರೋಪಕ್ಕೆ ಸಾಕಷ್ಟು ಸಾಕ್ಷಿ ಪುರಾವೆಗಳನ್ನು ಒದಗಿಸಲು ಸಿದ್ಧ ಎಂದು ಜಸ್ವಂತ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದರು. ಪಕ್ಷದಿಂದ ಉಚ್ಚಾಟಿಸಲು ಮೊದಲು ಕಾರಣ ಕೇಳಿ ಶೋಕಾಸ್ ನೋಟಿಸ್ ಜಾರಿ ಮಾಡಲಾಗುತ್ತೆ. ಆದರೆ, ನನ್ನ ವಿಷಯದಲ್ಲಿ ಪಕ್ಷ ಎಲ್ಲ ನಿಯಮಗಳನ್ನು ಗಾಳಿಗೆ ತೂರಿ, ಏಕಾಏಕಿ ಇಂದು ನಡೆದ ಬೈಠಕ್ ನಲ್ಲಿ ಉಚ್ಚಾಟನೆ ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದರು.
(ಏಜನ್ಸೀಸ್)
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications