395 ಕೋ. ರು ನೆರವಿಗೆ ಮನವಿ : ಸಿಎಂ

ಯಡಿಯೂರಪ್ಪ ಹಾಗೂ ಕಂದಾಯ ಸಚಿವ ಕರುಣಾಕರರೆಡ್ಡಿ ಅವರು ನವದೆಹಲಿಯಲ್ಲಿ ಕೇಂದ್ರ ಕೃಷಿ ಸಚಿವ ಶರದ್ ಪವಾರ್ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿನ ಬರ ಪರಿಸ್ಥಿತಿ ಮತ್ತು ಮಳೆ, ಪ್ರವಾಹದಿಂದ ಉಂಟಾಗಿರುವ ಹಾನಿ ಕುರಿತು ಮನವಿ ಸಲ್ಲಿಸಿದರು. ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದರೂ 20 ಜಿಲ್ಲೆಗಳಿಗೆ ಸೇರಿದ 86 ತಾಲ್ಲೂಕುಗಳ 308 ಹೋಬಳಿಗಳಲ್ಲಿ ಬರ ಪರಿಸ್ಥಿತಿ ಇದೆ. ಬೆಳೆ ಹಾನಿ ಇತ್ಯಾದಿಗಳಿಂದ 700 ಕೋಟಿ ರುಪಾಯಿ ನಷ್ಟವಾಗಿದೆ ಎಂದು ಅಂದಾಜು ಮಾಡಲಾಗಿದೆ. ಕೇಂದ್ರ ಸರಕಾರವದ ಮಾರ್ಗಸೂಚಿ ಅನ್ವಯ 395 ಕೋಟಿ ರುಪಾಯಿ ನೆರವು ಕೋರಿದ್ದು, ಅದನ್ನು ತ್ವರಿತವಾಗಿ ಬಿಡುಗಡೆ ಮಾಡಬೇಕೆಂದು ಕೋರಿದ್ದೇವೆ ಎಂದು ಅವರು ತಿಳಿಸಿದ್ದಾರೆ.
(ಏಜನ್ಸೀಸ್)











Click it and Unblock the Notifications