ಎಚ್1ಎನ್1 ಭಯ : ಪಾರ್ಸೆಲ್ ಮೊರೆ ಹೋದ ಜನ
ಬೆಂಗಳೂರು, ಆ. 19 : ಎಚ್ 1ಎನ್ 1 ಮಾರಿಗೆ ಬೆಂಗಳೂರಿಗರು ತೀವ್ರ ಭಯಭೀತರಾಗಿದ್ದು, ಮನೆಯಿಂದ ಹೊರಹೋಗಲು ಮನಸ್ಸು ಮಾಡುತ್ತಿಲ್ಲ. ಈಗಾಗಲೇ ಬೆಂಗಳೂರು ನಗರವೊಂದರಲ್ಲೇ ಐದು ಮಂದಿ ಹಂದಿಜ್ವರದಿಂದ ಮೃತಪಟ್ಟಿರುವುದು ದೃಢವಾಗಿದೆ. (ಮಂಗಳವಾರ ಮೃತಪಟ್ಟಿರುವ ಮಂಜುನಾಥ್ ಎಚ್1ಎನ್1 ನಿಂದ ಸಾವನ್ನಪ್ಪಿಲ್ಲ ಎಂದು ವಿಕ್ಟೋರಿಯಾ ವೈದ್ಯರು ಸ್ಪಷ್ಟಪಡಿಸಿದ್ದಾರೆ)
ಎಚ್1 ಎನ್1 ಮಾರಿಗೆ ಹಾವಳಿ ಮೀತಿಮೀರುತ್ತಿದ್ದು, ಕಚೇರಿ ಮುಗಿಸಿ ಆಹಾರ, ತಿಂಡಿ ಮತ್ತಿತರ ಕಾರಣಗಳಿಗೆ ಹೊರಹೋಗುತ್ತಿದ್ದ ಜನರು ಇದೀಗ ಹೋಟೆಲ್, ರೆಸ್ಟೋರೆಂಟ್ ಗಳಿಂದ ಪಾರ್ಸೆಲ್ ಗೆ ತರುತ್ತಿದ್ದಾರೆ. ಇನ್ನೂ ಕೆಲ ಸ್ಥಿತವಂತರು ವೆಬ್ ಸೈಟ್ ಮೂಲಕ ಆರ್ಡರ್ ಮಾಡಿ ತಮಗೆ ಬೇಕೆನಿಸಿದೆ ಆಹಾರಗಳನ್ನು ತರಿಸಿಕೊಳ್ಳುವುದು ಸಾಮಾನ್ಯ ದೃಶ್ಯವಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಹಂಗ್ರಿಜೋನ್.ಕಾಂ ನ ಸಂಸ್ಥಾಪಕ ರಿತೇಶ್ ದ್ವಿವೇದಿ, ಬೆಂಗಳೂರಿನಲ್ಲಿ ಹಂದಿಜ್ವರದಿಂದ ಸಾವುಗಳು ಸಂಭವಿಸುತ್ತಿರುವುದರಿಂದ ಜನಜಂಗುಳಿ ಇರುವ ಸ್ಥಳಗಳಿಗೆ ಬರಲು ಅನೇಕರು ಹಿಂದೇಟು ಹಾಕುತ್ತಿದ್ದಾರೆ. ಈ ಕಾರಣಕ್ಕಾಗಿ ಪಾರ್ಸೆಲ್ ತೆಗೆದುಕೊಂಡು ಹೋಗುವುದು, ಪಾರ್ಸೆಲ್ ತರಿಸಿಕೊಳ್ಳುವುದು ಹೆಚ್ಚಾಗಿದೆ. ಕಳೆದ 15 ದಿನಗಳ ಅವಧಿಯಲ್ಲಿ ನಮ್ಮ ವ್ಯಾಪಾರ ವಹಿವಾಟು ಶೇ. 10 ರಷ್ಟು ಏರಿಕೆ ಕಂಡಿದೆ ಎಂದು ಹೇಳುತ್ತಾರೆ.
ಮುಂಜಾಗ್ರತಾ ಕ್ರಮವಾಗಿ ಹೆಚ್ಚು ಜನರಿರುವ ಕಡೆಯಲ್ಲಿ ನಾವು ತೆರಳುತ್ತಿಲ್ಲ. ಎಚ್1ಎನ್1 ಹಾವಳಿ ತೀವ್ರವಾಗಿದ್ದರಿಂದ ಸುರಕ್ಷಿತಗಾಗಿ ಈ ಕ್ರಮ ಕೈಗೊಂಡಿದ್ದೇವೆ. ಮನೆಗೆ ಬೇಕಿರುವ ಅಗತ್ಯ ವಸ್ತುಗಳನ್ನು ಪಾರ್ಸೆಲ್ ತರಿಸಕೊಳ್ಳುತ್ತಿದ್ದೇವೆ ಎನ್ನುವುದು ಸಾಫ್ಟ್ ವೇರ್ ಇಂಜಿನಿಯರ್ ಮನೋಜ್ ಅವರ ಅಭಿಪ್ರಾಯವಾಗಿದೆ. ಒಟ್ಟಿನಲ್ಲಿ ಜನಸಾಮಾನ್ಯರು ತಮ್ಮ ಸುರಕ್ಷತೆಗೆ ಒತ್ತು ಕೊಡುವುದು ಉತ್ತಮ ಎನ್ನುವುದು ವೈದ್ಯರ ಅಭಿಮತವಾಗಿದೆ.
(ದಟ್ಸ್ ಕನ್ನಡ ವಾರ್ತೆ)
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications