ಜೆಡಿಎಸ್ ತೆಕ್ಕೆಗೆ ಚನ್ನಪಟ್ಟಣ, ರಾಮನಗರ

ವಾಲ್ಮೀಕಿ ನಾಯಕ್ ಗೆಲ್ಲುವ ಮೂಲಕ ಉಪಚುನಾವಣೆಯಲ್ಲಿ ಬಿಜೆಪಿ ಮೊದಲ ಗೆಲುವನ್ನು ದಾಖಲಿಸಿದೆ. ಈ ಹಿಂದೆ ಎರಡು ಬಾರಿ ಚುನಾವಣೆಗೆ ಸ್ಪರ್ಧಿಸಿ ವಾಲ್ಮೀಕಿ ನಾಯಕ್ ಸೋತಿದ್ದರು. ಇದೀಗ ಚಿತ್ತಾಪುರ ಮತದಾರರ ಚಿತ್ತವನ್ನು ಗೆದ್ದಿದ್ದಾರೆ.
ಆರಂಭದಲ್ಲಿ ಪ್ರಿಯಾಂಕ ಖರ್ಗೆ (ಕಾಂಗ್ರೆಸ್) ಮುನ್ನಡೆ ಸಾಧಿಸಿದ್ದರು. ನಂತರ ವಾಲ್ಮೀಕಿ ನಾಯಕ್ ಮುನ್ನಡೆ ಸಾಧಿಸಿ ಚಿತ್ತಾಪುರ ಕ್ಷೇತ್ರ ರೋಚಕ ತಿರುವನ್ನು ಪಡೆಯಿತು. ಪ್ರಿಯಾಂಕ ಖರ್ಗೆ ಮತ್ತು ವಾಲ್ಮೀಕಿ ನಾಯಕ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿತ್ತು.
ಜೆಡಿಎಸ್ ತೆಕ್ಕೆಗೆ ಚನ್ನಪಟ್ಟಣ,ರಾಮನಗರ
ಜೆಡಿಎಸ್ ನ ಎಂಸಿ ಅಶ್ವಥ್ 2120 ಮತಗಳ ಅಂತರದಿಂದ ಬಿಜೆಪಿಯ ಪ್ರಬಲ ಸ್ಪರ್ಧಿ ಸಿ ಪಿ ಯೋಗೇಶ್ವರ್ ವಿರುದ್ಧ ಜಯಭೇರಿ ಬಾರಿಸಿದ್ದಾರೆ.
ರಾಮನಗರದಲ್ಲಿ ಕೆ ರಾಜು 20284 ಮತಗಳ ಅಂತರದಿಂದ ಸಿ ಎಂ ಲಿಂಗಪ್ಪ (ಕಾಂಗ್ರೆಸ್) ವಿರುದ್ಧ ಗೆಲುವು ಸಾಧಿಸಿದ್ದಾರೆ. ಇದು ಜೆಡಿಎಸ್ ನ ಪ್ರತಿಷ್ಠಿತ ಕಣವಾಗಿತ್ತು. ರಾಮನಗರ ಮತ್ತು ಚನ್ನಪಟ್ಟಣ ಕ್ಷೇತ್ರಗಳನ್ನು ಉಳಿಸಿಕೊಳ್ಳುವಲ್ಲಿ ಜೆಡಿಎಸ್ ಯಶಸ್ವಿಯಾಗಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಮತ್ತು ಎಚ್ ಡಿ ಕುಮಾರಸ್ವಾಮಿ ಮತದಾರರ ಮನಗೆದ್ದಿದ್ದಾರೆ.
ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸಿ ಇಲ್ಲಾ ಅಂದರೆ ನಮಗೊಂದಿಷ್ಟು ವಿಷಕೊಡಿ ಎಂದು ಕುಮಾರಸ್ವಾಮಿ ಹೇಳಿದ್ದರು. ಆದರೆ ರಾಮನಗರ ಮತ್ತು ಚನ್ನಪಟ್ಟಣದ ಮತದಾರರು ಜೆಡಿಎಸ್ ಗೆ ಅಮೃತವನ್ನು ಕೊಟ್ಟಿದ್ದಾರೆ.
ಬಿಜೆಪಿ ತೆಕ್ಕೆಗೆ ಕೊಳ್ಳೇಗಾಲ
ಬಿಜೆಪಿ ಅಭ್ಯರ್ಥಿ ನಂಜುಂಡಸ್ವಾಮಿ ಗೆಲುವು ಸಾಧಿಸಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ ಬಿಜಿಪಿಗೆ ಗೆಲುವು ದೂರವಾಗಿತ್ತು. ಉಪಚುನಾವಣೆಯಲ್ಲಿ ನಂಜುಂಡಸ್ವಾಮಿ ಗೆಲುವು ಸಾಧಿಸುವ ಮೂಲಕ ಬಿಜೆಪಿಯ ಕನಸು ನೆರೆವೇರಿದೆ. ಆರಂಭದಿಂದಲೂ ಬಿಜೆಯ ಪ್ರಚಾರ ಕಾರ್ಯದಲ್ಲಿ ಸಾಕಷ್ಟು ಶ್ರಮ ವಹಿಸಿತ್ತು. ಹಾಗಾಗಿ ಕೊಳ್ಳೇಗಾಲ ಬಿಜೆಪಿಯ ವಶವಾಗಿದೆ. ಮತಗಳ ಅಂತರವನ್ನು ಅಧಿಕೃತವಾಗಿ ಪ್ರಕಟಿಸಿಲ್ಲ.
(ದಟ್ಸ್ ಕನ್ನಡ ವಾರ್ತೆ)
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications