ಜೆಡಿಎಸ್ ತೆಕ್ಕೆಗೆ ಚನ್ನಪಟ್ಟಣ, ರಾಮನಗರ

ವಾಲ್ಮೀಕಿ ನಾಯಕ್ ಗೆಲ್ಲುವ ಮೂಲಕ ಉಪಚುನಾವಣೆಯಲ್ಲಿ ಬಿಜೆಪಿ ಮೊದಲ ಗೆಲುವನ್ನು ದಾಖಲಿಸಿದೆ. ಈ ಹಿಂದೆ ಎರಡು ಬಾರಿ ಚುನಾವಣೆಗೆ ಸ್ಪರ್ಧಿಸಿ ವಾಲ್ಮೀಕಿ ನಾಯಕ್ ಸೋತಿದ್ದರು. ಇದೀಗ ಚಿತ್ತಾಪುರ ಮತದಾರರ ಚಿತ್ತವನ್ನು ಗೆದ್ದಿದ್ದಾರೆ.
ಆರಂಭದಲ್ಲಿ ಪ್ರಿಯಾಂಕ ಖರ್ಗೆ (ಕಾಂಗ್ರೆಸ್) ಮುನ್ನಡೆ ಸಾಧಿಸಿದ್ದರು. ನಂತರ ವಾಲ್ಮೀಕಿ ನಾಯಕ್ ಮುನ್ನಡೆ ಸಾಧಿಸಿ ಚಿತ್ತಾಪುರ ಕ್ಷೇತ್ರ ರೋಚಕ ತಿರುವನ್ನು ಪಡೆಯಿತು. ಪ್ರಿಯಾಂಕ ಖರ್ಗೆ ಮತ್ತು ವಾಲ್ಮೀಕಿ ನಾಯಕ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿತ್ತು.
ಜೆಡಿಎಸ್ ತೆಕ್ಕೆಗೆ ಚನ್ನಪಟ್ಟಣ,ರಾಮನಗರ
ಜೆಡಿಎಸ್ ನ ಎಂಸಿ ಅಶ್ವಥ್ 2120 ಮತಗಳ ಅಂತರದಿಂದ ಬಿಜೆಪಿಯ ಪ್ರಬಲ ಸ್ಪರ್ಧಿ ಸಿ ಪಿ ಯೋಗೇಶ್ವರ್ ವಿರುದ್ಧ ಜಯಭೇರಿ ಬಾರಿಸಿದ್ದಾರೆ.
ರಾಮನಗರದಲ್ಲಿ ಕೆ ರಾಜು 20284 ಮತಗಳ ಅಂತರದಿಂದ ಸಿ ಎಂ ಲಿಂಗಪ್ಪ (ಕಾಂಗ್ರೆಸ್) ವಿರುದ್ಧ ಗೆಲುವು ಸಾಧಿಸಿದ್ದಾರೆ. ಇದು ಜೆಡಿಎಸ್ ನ ಪ್ರತಿಷ್ಠಿತ ಕಣವಾಗಿತ್ತು. ರಾಮನಗರ ಮತ್ತು ಚನ್ನಪಟ್ಟಣ ಕ್ಷೇತ್ರಗಳನ್ನು ಉಳಿಸಿಕೊಳ್ಳುವಲ್ಲಿ ಜೆಡಿಎಸ್ ಯಶಸ್ವಿಯಾಗಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಮತ್ತು ಎಚ್ ಡಿ ಕುಮಾರಸ್ವಾಮಿ ಮತದಾರರ ಮನಗೆದ್ದಿದ್ದಾರೆ.
ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸಿ ಇಲ್ಲಾ ಅಂದರೆ ನಮಗೊಂದಿಷ್ಟು ವಿಷಕೊಡಿ ಎಂದು ಕುಮಾರಸ್ವಾಮಿ ಹೇಳಿದ್ದರು. ಆದರೆ ರಾಮನಗರ ಮತ್ತು ಚನ್ನಪಟ್ಟಣದ ಮತದಾರರು ಜೆಡಿಎಸ್ ಗೆ ಅಮೃತವನ್ನು ಕೊಟ್ಟಿದ್ದಾರೆ.
ಬಿಜೆಪಿ ತೆಕ್ಕೆಗೆ ಕೊಳ್ಳೇಗಾಲ
ಬಿಜೆಪಿ ಅಭ್ಯರ್ಥಿ ನಂಜುಂಡಸ್ವಾಮಿ ಗೆಲುವು ಸಾಧಿಸಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ ಬಿಜಿಪಿಗೆ ಗೆಲುವು ದೂರವಾಗಿತ್ತು. ಉಪಚುನಾವಣೆಯಲ್ಲಿ ನಂಜುಂಡಸ್ವಾಮಿ ಗೆಲುವು ಸಾಧಿಸುವ ಮೂಲಕ ಬಿಜೆಪಿಯ ಕನಸು ನೆರೆವೇರಿದೆ. ಆರಂಭದಿಂದಲೂ ಬಿಜೆಯ ಪ್ರಚಾರ ಕಾರ್ಯದಲ್ಲಿ ಸಾಕಷ್ಟು ಶ್ರಮ ವಹಿಸಿತ್ತು. ಹಾಗಾಗಿ ಕೊಳ್ಳೇಗಾಲ ಬಿಜೆಪಿಯ ವಶವಾಗಿದೆ. ಮತಗಳ ಅಂತರವನ್ನು ಅಧಿಕೃತವಾಗಿ ಪ್ರಕಟಿಸಿಲ್ಲ.
(ದಟ್ಸ್ ಕನ್ನಡ ವಾರ್ತೆ)
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications