ಆಪರೇಷನ್ ಕಮಲ ಹೇಯ ಕೃತ್ಯ : ಗೌಡ

ಫಲಿತಾಂಶದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರತಿ ಹಂತದಲ್ಲಿ ಬಿಜೆಪಿ ಸರಕಾರವನ್ನು ತರಾಟೆಗೆ ತೆಗೆದುಕೊಂಡರು. ರಾಜ್ಯ ರಾಜಕೀಯ ಇತಿಹಾಸದಲ್ಲಿ ಒಬ್ಬ ಮಂತ್ರಿಯನ್ನು ಸೋಲಿಸಿ ಉದಾಹರಣೆ ಇರಲಿಲ್ಲ. ಆದರೆ, ಇಂದು ಅದು ಸುಳ್ಳಾಗಿದ್ದು, ಬಿಜೆಪಿ ಕೆಟ್ಟ ಆಡಳಿತಕ್ಕೆ ಬೇಸತ್ತಿದ್ದಾರೆ ಎನ್ನುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕಿಲ್ಲ. ಜನವಿರೋಧಿ ಸರಕಾರ ಇನ್ನ ಮುಂದಾದರೂ ಜನಪರ ಕಾರ್ಯಗಳನ್ನು ಮಾಡಬೇಕು ಎಂದು ಗೌಡರು ಅಸಮಾಧಾನ ವ್ಯಕ್ತಪಡಿಸಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications