ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಪರೇಷನ್ ಕಮಲ ಹೇಯ ಕೃತ್ಯ : ಗೌಡ

By Staff
|
Google Oneindia Kannada News

HD Devegowda
ಬೆಂಗಳೂರು, ಆ. 21 : ಉಪಚುನಾವಣೆಗಳ ಫಲಿತಾಂಶಗಳು ನನಗೆ ಅತೀವ ಸಂತಸ ಉಂಟುಮಾಡಿದೆ. ಈ ಫಲಿತಾಂಶದಿಂದ ಜೆಡಿಎಸ್ ಗೆ ಮತ್ತಷ್ಟು ಶಕ್ತಿ ಬಂದಂತಾಗಿದೆ. ಗೋವಿಂದರಾಜನಗರ ಮತ್ತು ಚನ್ನಪಟ್ಟಣದಲ್ಲಿ ಆಪರೇಷನ್ ಕಮಲಕ್ಕೆ ತಕ್ಕ ಪಾಠ ಕಲಿಸಿದ್ದಾರೆ. ಬಿಜೆಪಿ ನಾಯಕರು ಈ ಹೇಯ ಕೃತ್ಯವನ್ನು ಕೈಬಿಡಬೇಕು ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಫಲಿತಾಂಶದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರತಿ ಹಂತದಲ್ಲಿ ಬಿಜೆಪಿ ಸರಕಾರವನ್ನು ತರಾಟೆಗೆ ತೆಗೆದುಕೊಂಡರು. ರಾಜ್ಯ ರಾಜಕೀಯ ಇತಿಹಾಸದಲ್ಲಿ ಒಬ್ಬ ಮಂತ್ರಿಯನ್ನು ಸೋಲಿಸಿ ಉದಾಹರಣೆ ಇರಲಿಲ್ಲ. ಆದರೆ, ಇಂದು ಅದು ಸುಳ್ಳಾಗಿದ್ದು, ಬಿಜೆಪಿ ಕೆಟ್ಟ ಆಡಳಿತಕ್ಕೆ ಬೇಸತ್ತಿದ್ದಾರೆ ಎನ್ನುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕಿಲ್ಲ. ಜನವಿರೋಧಿ ಸರಕಾರ ಇನ್ನ ಮುಂದಾದರೂ ಜನಪರ ಕಾರ್ಯಗಳನ್ನು ಮಾಡಬೇಕು ಎಂದು ಗೌಡರು ಅಸಮಾಧಾನ ವ್ಯಕ್ತಪಡಿಸಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X