ಎರಡನೇ ಹುಟ್ಟುಹಬ್ಬಕ್ಕೆ ರಾಮನಗರ ಜಿಲ್ಲೆ ಸಿಂಗಾರ

ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಅಧಿಕಾರ ಹಿಡಿದಾಗಿನಿಂದ ಇಂದಿನವರೆಗೂ ಕ್ಷೇತ್ರದಲ್ಲಿ ನಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆರಂಭಿಸಿದ್ದ ಅಭಿವೃದ್ದಿ ಕಾಮಗಾರಿಗಳಿಗೆ ಸಮರ್ಪಕ ರೀತಿಯಲ್ಲಿ ಹಣಬಿಡುಗಡೆ ಮಾಡದೆ ನಿರ್ಲಕ್ಷ್ಯ ಮಾಡಿದೆ ಎಂದು ಉಪಚುನಾವಣೆಯಲ್ಲಿ ಆಯ್ಕೆಯಾಗಿರುವ ನೂತನ ಶಾಸಕ ಕೆ.ರಾಜು ಆರೋಪಿಸಿದ್ದಾರೆ.
ಜಿಲ್ಲೆಯಲ್ಲಿ ನಡೆಯುತ್ತಿರುವ ಕಾಮಗಾರಿಗಳಲ್ಲಿ ತ್ವರಿತಗತಿಯಲ್ಲಿ ಸಾಗದೇ ಆಮೆಗತಿಯಲ್ಲಿ ಸಾಗುವಂತಾಗಿ ಕಾಮಗಾರಿಗಳೆಲ್ಲಾ ಅರ್ಧದಲ್ಲೇ ನಿಲ್ಲುವಂತಾಗಿದೆ. ಜಿಲ್ಲಾ ಕೇಂದ್ರವಾಗಿ ಎರಡು ವರ್ಷ ಪೂರೈಸಿದರೂ ಜಿಲ್ಲೆಯ ಅಭಿವೃದ್ದಿಗೆ ಬಿಜೆಪಿ ಸರ್ಕಾರ ಯಾವುದೇ ವಿಶೇಷ ಯೋಜನೆಗಳನ್ನ ರೂಪಿಸದೆ ಅಭಿವೃದ್ದಿಗೆ ಅಡ್ಡಗಾಲು ಹಾಕಿದೆ. ಹೋರಾಟಗಳನ್ನ ನಡೆಸಿದರೂ ಬಿಜೆಪಿ ಸರ್ಕಾರ ಮಾತ್ರ ಜಾಣಕುರುಡುತನ ಪ್ರದರ್ಶಿಸುತ್ತಿದ್ದಾರೆ. ಮುಂದೆಯೂ ಕೂಡ ಇದೇ ರೀತಿ ನಿರ್ಲಕ್ಷ್ಯ ಮಾಡಿ ಕ್ಷೇತ್ರದ ಅಭಿವೃದ್ದಿಗೆ ಬಿಜೆಪಿ ಸರ್ಕಾರ ಸ್ಪಂದಿಸದಿದ್ದರೆ ಹೋರಾಟ ನಡೆಸಲಾಗುವುದೆಂದು ಕೆ.ರಾಜು ಎಚ್ಚರಿಸಿದ್ದಾರೆ.
ರಾಮನಗರದಲ್ಲಿ ನಡೆಯುತ್ತಿರುವ ಜಿಲ್ಲಾ ಕಛೇರಿಗಳಸಂಕೀರ್ಣ. ಪೋಲೀಸ್ ವರಿಷ್ಠಾಧಿಕಾರಿಗಳ ಕಛೇರಿ ಮತ್ತಿತರ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡದೇ ತಾರತಮ್ಯ ಮಾಡುತ್ತಿದೆ. ಕುಮಾರಸ್ವಾಮಿಯವರ ಕನಸಿನ ಕೂಸಾಗಿರುವ ರಾಜೀವ್ಗಾಂಧೀ ಆರೋಗ್ಯವಿವಿ ಕಾಮಗಾರಿ ಆರಂಭಿಸಲು ಕೂಡ ಬಿಜೆಪಿ ಸರ್ಕಾರ ಮೀನಮೇಷ ಎಣಿಸುತ್ತಿದೆ. ಒಟ್ಟಾರೆ ಸರ್ವಾಂಗೀಣ ಅಭಿವೃದ್ದಿ ಕಾಣಬೇಕಾದ ರಾಮನಗರ ಬಿಜೆಪಿ ಸರ್ಕಾರದ ಇಬ್ಬಗೆ ನೀತಿಯಿಂದ ಹಿಂದುಳಿಯುವಂತಾಗಿದೆ. ಬಿಜೆಪಿ ಸರ್ಕಾರದ ದ್ವೇಷದ ರಾಜಕಾರಣಕ್ಕೆ ಹೋರಾಟದ ಮೂಲಕವೇ ಉತ್ತರ ನೀಡುವುದಾಗಿ ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷ ಬ್ಯಾಟಪ್ಪ ಎಚ್ಚರಿಸಿದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications