ಎಚ್1ಎನ್1 ಬಗ್ಗೆ ಪ್ರಚಾರಾಂದೋಲನ
ಬೆಂಗಳೂರು, ಆ.22: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕಾಣಿಸಿಕೊಂಡಿರುವ ಡೆಂಗ್ಯೂ, ಚಿಕನ್ಗುನ್ಯ, ಹೆಚ್1ಎನ್1 ಇತ್ಯಾದಿ ಸಾಂಕ್ರಮಿಕ ರೋಗಗಳು ಒಬ್ಬರಿಂದ ಒಬ್ಬರಿಗೆ ಬಹುಬೇಗ ಹರಡುತ್ತಿವೆ. ಕೂಡಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಾದ ಕಾರಣ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ನಗರಸಭೆ/ಪುರಸಭೆ/ಪಟ್ಟಣ ಪಂಚಾಯತ್ತಿಗಳ ಅಧಿಕಾರಿಗಳು, ಸಮರೋಪಾದಿಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್. ಕೆ. ರಾಜು ತಿಳಿಸಿದರು.
ಜನಸಾಮಾನ್ಯರು ಆತಂಕ-ಭೀತಿಗೊಳ್ಳದ ರೀತಿ ಸರಿಯಾದ ಮಾಹಿತಿಯನ್ನು ಅವರಿಗೆ ತಲುಪಿಸಿ, ಅರಿವುಂಟು ಮಾಡುವ ಬಗ್ಗೆ ತೀವ್ರ ಪ್ರಚಾರಾಂದೋಲನ ಕೈಗೊಳ್ಳಬೇಕಿದೆ ಎಂದು ರಾಜು ಹೇಳಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಸಾಂಕ್ರಮಿಕ ರೋಗಗಳ ನಿಯಂಥ್ರಣ ಕುರಿತ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡುತ್ತಿದ್ದರು. ರೋಗ ಲಕ್ಷಣಗಳು ಹಾಗೂ ನಿಯಂತ್ರಣದ ಬಗ್ಗೆ ರೇಡಿಯೋ, ಟಿ.ವಿ. ಚಲನಚಿತ್ರ ಮಂದಿರಗಳಲ್ಲಿ ಪ್ರಚಾರ, ಹೋರ್ಡಿಂಗ್ಸ್ಗಳ ಪ್ರಕಟಣೆ ಕರಡುಪತ್ರ ಬ್ಯಾನರ್ಸ್ಗಳ ಮೂಲಕ ಸಾರ್ವಜನಿಕರಲ್ಲಿ ಸಾಕಷ್ಟು ಜಾಗೃತಿಯುಂಟುಮಾಡುವುದು.
ನಿರಂತರ ಸ್ವಚ್ಚತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು, ವಾರ್ಡ್ಗಳಲ್ಲಿ ನಿಯಮಿತವಾಗಿ ಫಾಗಿಂಗ್ ಮಾಡುವುದು, ಫಾಗಿಂಗ್ ಯಂತ್ರಗಳ ಕೊರತೆಯಿದ್ದಲ್ಲಿ ಪ್ರತಿ ತಾಲ್ಲೂಕಿಗೆ ಕನಿಷ್ಠ ಮೂರು ಯಂತ್ರಗಳನ್ನಾದರೂ ಖರೀದಿಸಿ ಕಾರ್ಯೋನ್ಮುಖರಾಗದಿದ್ದಲ್ಲಿ ಅಧಿಕಾರಿಗಳ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಅಧಿಕಾರಿಗಳ ಮಾಹಿತಿಗಾಗಿ ಜಿಲ್ಲಾ ಆರೋಗ್ಯಾಧಿಕಾರಿಗಲು ಹಂದಿಜ್ವರ ಎಂದೇ ಪ್ರಚಲಿತವಿರುವ ಹೆಚ್1 ಎನ್1 ರೋಗವನ್ನು, ಹಂದಿಜ್ವರ ಎಂದು ಕರೆಯಬಾರದು, ಹಂದಿಯಿಂದಾಗಲಿ ಅಥವಾ ಹಂದಿ ಮಾಂಸ ತಿನ್ನುವುದರಿಂದಾಗಲಿ ಈ ರೋಗ ಹರಡುವುದಿಲ್ಲ ಎಂದು ಸ್ವಷ್ಟಪಡಿಸಿದರು. ಗಾಳಿಯಲ್ಲಿ ವೈರಸ್ ಮೂಲಕ ಮನುಷ್ಯರಿಂದ ಮನುಷ್ಯರಿಗೆ ಹೆಚ್1ಎನ್1 ಹರಡುವುದರಿಂದ ಸೋಂಕಿತರು ಮಾಸ್ಕ್ಧರಿಸಬೇಕೆ ವಿನಹಾ ಉಳಿದವರು ಹಾಕಿಕೊಂಡು ಪ್ರಯೋಜನವಿಲ್ಲ ಎಂದು ತಿಳಿಸಿದರು.
(ದಟ್ಸ್ ಕನ್ನಡ ವಾರ್ತೆ)
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications