ಎಚ್1ಎನ್1 ಬಗ್ಗೆ ಪ್ರಚಾರಾಂದೋಲನ
ಬೆಂಗಳೂರು, ಆ.22: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕಾಣಿಸಿಕೊಂಡಿರುವ ಡೆಂಗ್ಯೂ, ಚಿಕನ್ಗುನ್ಯ, ಹೆಚ್1ಎನ್1 ಇತ್ಯಾದಿ ಸಾಂಕ್ರಮಿಕ ರೋಗಗಳು ಒಬ್ಬರಿಂದ ಒಬ್ಬರಿಗೆ ಬಹುಬೇಗ ಹರಡುತ್ತಿವೆ. ಕೂಡಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಾದ ಕಾರಣ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ನಗರಸಭೆ/ಪುರಸಭೆ/ಪಟ್ಟಣ ಪಂಚಾಯತ್ತಿಗಳ ಅಧಿಕಾರಿಗಳು, ಸಮರೋಪಾದಿಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್. ಕೆ. ರಾಜು ತಿಳಿಸಿದರು.
ಜನಸಾಮಾನ್ಯರು ಆತಂಕ-ಭೀತಿಗೊಳ್ಳದ ರೀತಿ ಸರಿಯಾದ ಮಾಹಿತಿಯನ್ನು ಅವರಿಗೆ ತಲುಪಿಸಿ, ಅರಿವುಂಟು ಮಾಡುವ ಬಗ್ಗೆ ತೀವ್ರ ಪ್ರಚಾರಾಂದೋಲನ ಕೈಗೊಳ್ಳಬೇಕಿದೆ ಎಂದು ರಾಜು ಹೇಳಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಸಾಂಕ್ರಮಿಕ ರೋಗಗಳ ನಿಯಂಥ್ರಣ ಕುರಿತ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡುತ್ತಿದ್ದರು. ರೋಗ ಲಕ್ಷಣಗಳು ಹಾಗೂ ನಿಯಂತ್ರಣದ ಬಗ್ಗೆ ರೇಡಿಯೋ, ಟಿ.ವಿ. ಚಲನಚಿತ್ರ ಮಂದಿರಗಳಲ್ಲಿ ಪ್ರಚಾರ, ಹೋರ್ಡಿಂಗ್ಸ್ಗಳ ಪ್ರಕಟಣೆ ಕರಡುಪತ್ರ ಬ್ಯಾನರ್ಸ್ಗಳ ಮೂಲಕ ಸಾರ್ವಜನಿಕರಲ್ಲಿ ಸಾಕಷ್ಟು ಜಾಗೃತಿಯುಂಟುಮಾಡುವುದು.
ನಿರಂತರ ಸ್ವಚ್ಚತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು, ವಾರ್ಡ್ಗಳಲ್ಲಿ ನಿಯಮಿತವಾಗಿ ಫಾಗಿಂಗ್ ಮಾಡುವುದು, ಫಾಗಿಂಗ್ ಯಂತ್ರಗಳ ಕೊರತೆಯಿದ್ದಲ್ಲಿ ಪ್ರತಿ ತಾಲ್ಲೂಕಿಗೆ ಕನಿಷ್ಠ ಮೂರು ಯಂತ್ರಗಳನ್ನಾದರೂ ಖರೀದಿಸಿ ಕಾರ್ಯೋನ್ಮುಖರಾಗದಿದ್ದಲ್ಲಿ ಅಧಿಕಾರಿಗಳ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಅಧಿಕಾರಿಗಳ ಮಾಹಿತಿಗಾಗಿ ಜಿಲ್ಲಾ ಆರೋಗ್ಯಾಧಿಕಾರಿಗಲು ಹಂದಿಜ್ವರ ಎಂದೇ ಪ್ರಚಲಿತವಿರುವ ಹೆಚ್1 ಎನ್1 ರೋಗವನ್ನು, ಹಂದಿಜ್ವರ ಎಂದು ಕರೆಯಬಾರದು, ಹಂದಿಯಿಂದಾಗಲಿ ಅಥವಾ ಹಂದಿ ಮಾಂಸ ತಿನ್ನುವುದರಿಂದಾಗಲಿ ಈ ರೋಗ ಹರಡುವುದಿಲ್ಲ ಎಂದು ಸ್ವಷ್ಟಪಡಿಸಿದರು. ಗಾಳಿಯಲ್ಲಿ ವೈರಸ್ ಮೂಲಕ ಮನುಷ್ಯರಿಂದ ಮನುಷ್ಯರಿಗೆ ಹೆಚ್1ಎನ್1 ಹರಡುವುದರಿಂದ ಸೋಂಕಿತರು ಮಾಸ್ಕ್ಧರಿಸಬೇಕೆ ವಿನಹಾ ಉಳಿದವರು ಹಾಕಿಕೊಂಡು ಪ್ರಯೋಜನವಿಲ್ಲ ಎಂದು ತಿಳಿಸಿದರು.
(ದಟ್ಸ್ ಕನ್ನಡ ವಾರ್ತೆ)
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ












Click it and Unblock the Notifications