ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೋಮಣ್ಣ ಸೋಲು ಬೇಸರ ತಂದಿದೆ : ಸಿಎಂ

By Staff
|
Google Oneindia Kannada News

Somanna defeat is unfortunate:BSY
ಬೆಂಗಳೂರು, ಆ. 22 : ಮುಜರಾಯಿ ಸಚಿವ ವಿ ಸೋಮಣ್ಣ ಸೋಲು ಮನಸ್ಸಿಗೆ ಭಾರಿ ಆಘಾತವಾಗಿದೆ. ಬಿಜೆಪಿ ಸೇರ್ಪಡೆಗೊಂಡಿರುವ ಸೋಮಣ್ಣ ಹಾಗೂ ಸಿಪಿ ಯೋಗೀಶ್ವರ್ ಅವರಿಗೆ ಸೂಕ್ತ ಸ್ಥಾನಮಾನ ನೀಡಲು ಸಿದ್ಧ. ಸಂಪುಟ ಪುನರ್ ರಚನೆಗೆ ಸಂಬಂಧಿಸಿದಂತೆ ಇನ್ನೆರಡು ದಿನಗಳಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಫಲಿತಾಂಶದ ನಂತರ ತೀವ್ರ ಬೇಸರದಿಂದಲೇ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ, ಗೋವಿಂದರಾಜ ನಗರ ಮತ್ತು ಚನ್ನಪಟ್ಟಣದಲ್ಲಿ ಬಿಜೆಪಿಗೆ ಹಿನ್ನೆಡೆಯಾಗಿರುವುದು ನಿಜ ಎಂದು ಒಪ್ಪಿಕೊಂಡಿದ್ದಾರೆ. ಈ ಎರಡು ಕ್ಷೇತ್ರಗಳು ಬಿಜೆಪಿ ಕ್ಷೇತ್ರಗಳಲ್ಲ, ಆದರೂ ನಾವು ಅಲ್ಲಿ ಎರಡನೇ ಸ್ಥಾನದಲ್ಲಿ ಇದ್ದೇವೆ. ಸರಕಾರ ಅಭಿವೃದ್ಧಿ ಕಾರ್ಯಗಳು ಜನರಿಗೆ ತಲುಪಿವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತೇವೆ ಎಂದು ಯಡಿಯೂರಪ್ಪ ವಿವರಿಸಿದರು.

ನಮ್ಮ ನಿರೀಕ್ಷೆ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ನಂಬಿಕೆ ಇತ್ತು. ಒಂದು ವಿಷಯ ಸ್ಪಷ್ಟವೆಂದರೆ, ಕೊಳ್ಳೇಗಾಲ ಮತ್ತು ಚಿತ್ತಾಪುರದಲ್ಲಿ ಬಿಜೆಪಿ ಪ್ರಬಲ ಪೈಪೋಟಿ ನೀಡಲಿದೆ ಎಂಬ ನಿರೀಕ್ಷೆಯಿಂತ್ತು. ಗೆಲುವು ಸಾಧಿಸಿದ್ದೇವೆ. ಇದು ಹೆಮ್ಮೆಯ ಸಂಗತಿ. ಸರಕಾರದ ಅಭಿವೃದ್ಧಿ ಕೆಲಸಕ್ಕಾಗಿ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಅವರು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X