ತಿರುಪತಿ ಅರ್ಚಕ ವೆಂಕಟರಮಣ ಇನ್ ಸಂಕಟ

ತೀವ್ರ ಹಣಕಾಸು ಬಿಕ್ಕಟ್ಟಿನಲ್ಲಿ ಸಿಲುಕಿದ್ದೇನೆಂದು ಹೇಳಿರುವ ಜಗತ್ತಿನ ಅತ್ಯಂತ ಶ್ರೀಮಂತ ಗುಡಿ ತಿರುಪತಿ ತಿಮ್ಮಪ್ಪ ದೇವಸ್ಥಾನದ ಪ್ರಧಾನ ಅರ್ಚಕ ದೇವಸ್ಥಾನದ ಆಭರಣವನ್ನೇ ಅಡವಿಟ್ಟ ಪ್ರಸಂಗದಿಂದಾಗಿ ಸಂಕಟದಲ್ಲಿ ತಾವೇ ಸಿಕ್ಕುಬಿದ್ದಿದ್ದಾರೆ. ಈ ಸಂಕಟದಿಂದಾಗಿ ಮತ್ತೆ ವೆಂಕಟರಮಣನಿಗೇ ಮೊರೆಹೋಗಬೇಕಾಗಿ ಬಂದಿರುವುದು ನಿಜಕ್ಕೂ ವಿಪರ್ಯಾಸ.
ತಿರುಪತಿ ತಿರುಮಲ ದೇವಸ್ಥಾನಂನ ಪ್ರಧಾನ ಅರ್ಚಕ ವೆಂಕಟರಮಣ ದೀಕ್ಷಿತುಲು ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಆದರೆ, ಅರ್ಚಕರ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣವನ್ನು ಇನ್ನೂ ದಾಖಲಿಸಿಲ್ಲ.
ಕೋದಂಡ ರಾಮ ಮಂದಿರದ ಪ್ರಧಾನ ಅರ್ಚಕ ವೆಂಕಟರಮಣ 9 ಲಕ್ಷ ರು. ಬೆಲೆಯ 530 ಗ್ರಾಂ. ತೂಕದ ಬಾಲಾಜಿ ದೇವರ ವಜ್ರಖಚಿತ ಹಾರವನ್ನು ಅಡವಿಟ್ಟು ತೊಂದರೆಗೆ ಸಿಲುಕಿದ್ದಾರೆ. ಮೂವರು ಹೆಣ್ಣುಮಕ್ಕಳ ತಂದೆಯಾಗಿರುವ ತಾವು ತೀವ್ರ ಹಣಕಾಸಿನ ಬಿಕ್ಕಟ್ಟಿಗೆ ಸಿಲುಕಿದ್ದರಿಂದ ಹೀಗೆ ಮಾಡಿರುವುದಾಗಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಬಹಿರಂಗ ಪಡಿಸಿದ್ದಾರೆ.
"ನನ್ನ ಹಣಕಾಸು ಸ್ಥಿತಿ ಚಿಂತಾಜನಕವಾಗಿತ್ತು. ಆದ್ದರಿಂದ ಹೀಗೆ ಮಾಡಿದ್ದೇನೆ. ಈ ಕೃತ್ಯಕ್ಕಾಗಿ ಬೇರೆ ಯಾರೂ ಜವಾಬ್ದಾರರಲ್ಲ. ಆಭರಣವನ್ನು ಬರೀ ಅಡವಿಟ್ಟಿದ್ದೇನೆ, ಮಾರಿಲ್ಲ" ಎಂದು ಅವರು ತಿಳಿಸಿದ್ದಾರೆ. ದೇವಸ್ಥಾನಕ್ಕೆ ಸೇರಿದ ಎರಡು ಅಮೂಲ್ಯ ಹಾರಗಳು ಕಾಣೆಯಾದ ಹಿನ್ನೆಲೆಯಲ್ಲಿ ಮೊದಲು ಟಿಟಿಡಿ ಅಧಿಕಾರಿಗಳು ಅರ್ಚಕರನ್ನು ವಿಚಾರಿಸಿ ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.
(ಏಜೆನ್ಸೀಸ್)
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications