ಸೋತ ಯೋಗಿಗೆ ಸಿಎಂ ಸಾಂತ್ವನದ ಮುಲಾಮು

ಮಳೆ ನೀರು ನಂಬಿ ಗಡಿಗೆಯಲ್ಲಿದ್ದ ನೀರು ಚಲ್ಲಿದ ಎಂಬಂತೆ ಯೋಗೀಶ್ವರ್ ಕಾಂಗ್ರೆಸ್ ತೊರೆದು 'ಆಪರೇಷನ್ ಕಮಲ'ಕ್ಕೆ ಒಳಗಾಗಿ ಬಿಜೆಪಿ ಸೇರಿ ಬೆಂಗಳೂರು ಗ್ರಾಮೀಣ ಲೋಕಸಭೆ ಕ್ಷೇತ್ರ ಹಾಗೂ ಚನ್ನಪಟ್ಟಣ ವಿಧಾನ ಸಭೆ ಕ್ಷೇತ್ರಕ್ಕೆ ನಡೆದ ಮರು ಚುನಾವಣೆಯಲ್ಲಿ ಪರಾಭವಗೊಂಡಿದ್ದಾರೆ. ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಎಂಸಿ ಅಶ್ವತ್ಥ್ ವಿರುದ್ಧ ಯೋಗೀಶ್ವರ್ ಸೋಲುಂಡಿದ್ದಾರೆ.
ತಮ್ಮ, 12 ವರ್ಷದ ರಾಜಕೀಯ ಬದುಕಿನಲ್ಲಿ ಯೋಗೀಶ್ವರ್ ಇದೇ ಮೊದಲ ಬಾರಿಗೆ ಒಂದೇ ವರ್ಷದಲ್ಲಿ ಎರಡು ಬಾರಿ ಎಡವಿದ್ದಾರೆ. ಈ ಚುನಾವಣೆಯಲ್ಲಿ ಕಡಿಮೆ ಮತಗಳ ಅಂತರದಲ್ಲಿ ಪರಾಭವಗೊಂಡಿರುವ ಅವರನ್ನು ಯಡಿಯೂರಪ್ಪ ಭೇಟಿ ಮಾಡಿ, ಸಾಂತ್ವನ ಹೇಳುವುದರ ಜತಗೆ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಸೂಕ್ತ ಸ್ಥಾನ ಮಾನ ನೀಡುವ ಭರವಸೆ ನೀಡಿದ್ದಾರೆ.
ಈಗ ಲಭ್ಯವಿರುವ ಮಾಹಿತಿಯಂತೆ ಹಳೆ ಮೈಸೂರು ಭಾಗದಲ್ಲಿ ಬಿಜೆಪಿಯನ್ನು ಬೆಳೆಸಲು ಪಕ್ಷದ ಮುಖಂಡರು ತವಕಿಸುತ್ತಿದ್ದಾರೆ. ಅದರಂತೆ ಯೋಗೀಶ್ವರ್ಗೆ ನಿಗಮ ಮಂಡಳಿಯ ಅಧ್ಯಕ್ಷರನ್ನಾಗಿ ಮಾಡಿ, ಪಕ್ಷದ ಸಂಘಟನೆಗೆ ಬಳಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.
ಚನ್ನಪಟ್ಟಣದಲ್ಲಿ ಯೋಗೀಶ್ವರ್ ಸೋತರೂ ಬಿಜೆಪಿಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ಈವರಗೆ ಗ್ರಾಮೀಣ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳದ್ದೇ ಪಾರುಪತ್ಯ. ಈಗ ಗ್ರಾಮೀಣ ಪ್ರದೇಶದಲ್ಲಿ ಕಾಂಗ್ರೆಸ್ ಜೆಡಿಎಸ್ಗಿಂತ ಬಿಜೆಪಿಗೆ ಉತ್ತಮ ಜನಬೆಂಬಲ ದೊರೆತಿದ್ದು, ಇದನ್ನು ಮನಗಂಡಿರುವ ಬಿಜೆಪಿ ವರಿಷ್ಠರು ಯೋಗೀಶ್ವರ್ಗೆ ಸೂಕ್ತ ಸ್ಥಾನ ಮಾನ ನೀಡಲಿದ್ದಾರೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications