ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಮಾಜ ಕಲ್ಯಾಣ ಸಚಿವ ಸುಧಾಕರ್ ರಾಜೀನಾಮೆ?

By Staff
|
Google Oneindia Kannada News

D Sudhakar
ಬೆಂಗಳೂರು, ಆ. 24 : ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಬಂಧಿಸಿದಂತೆ ವಂಚನೆ ಆರೋಪ ಎದುರಿಸುತ್ತಿರುವ ಸಮಾಜ ಕಲ್ಯಾಣ ಸಚಿವ ಡಿ ಸುಧಾಕರ್ ಅವರನ್ನು ಯಡಿಯೂರಪ್ಪ ಸಂಪುಟದಿಂದ ಕೈಬಿಡುವ ಸಾಧ್ಯತೆಯಿದೆ. ಅದಕ್ಕೆ ಮುನ್ನವೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದು ಸೂಕ್ತ ಎನ್ನುವ ಸಲಹೆ ನೀಡಲಾಗಿದೆ.

ಈ ಸಂಬಂಧ ಸುಧಾಕರ್ ಮೇಲೆ ಒತ್ತಡ ಹಾಕಲಾಗಿದ್ದು, ಅವರು ಸಚಿವರಾಗುವ ಮೊದಲೇ ತ್ರಿಶೂಲ್ ಎಂಟರ್ ಪ್ರೈಸಸ್ ಮತ್ತು ಸೆವೆನ್ ಹಿಲ್ಸ್ ಪ್ರಾಪರ್ಟಿಸ್ ಸಂಸ್ಥೆ ಹೆಸರಿನಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸಿ, ಮೈಸೂರು ಬ್ಯಾಂಕಿನ ಗಾಂಧಿನಗರ ಶಾಖೆಯನ್ನು ವಂಚಿಸಿರುವ ಆರೋಪವಿದೆ. ಬಹಳ ಇಕ್ಕಿಟ್ಟಿಗೆ ಸಿಲುಕಿರುವ ಸುಧಾಕರ್ ರಾಜೀನಾಮೆ ನೀಡುವುದು ಅನಿವಾರ್ಯವಾಗಿದೆ.

ಸೆಫ್ಟೆಂಬರ್ 9ರಂದು ಮೂರು ದಿನಗಳ ಕಾಲ ವಿಧಾನಮಂಡಲ ವಿಶೇಷ ಅಧಿವೇಶನದ ನಡೆಯಲಿದೆ. ಅದಕ್ಕೂ ಮುನ್ನವೇ ಸುಧಾಕರ್ ಅವರಿಂದ ರಾಜೀನಾಮೆ ಪಡೆದು, ಅವರ ಜಾಗಕ್ಕೆ ಹೊಸಬರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಮುಖ್ಯಮಂತ್ರಿ ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X