ರೈತರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಹೋರಾಟ:ಗೌಡ

ಈ ಸರಕಾರದ ಕೆಲ ಸಚಿವರಿಗೆ ಕಾನೂನಿನ ಪ್ರಜ್ಞೆ ಅನ್ನುವುದೇ ಇಲ್ಲ.ನ್ಯಾಯಾಲಯ ಮೂರು ಬಾರಿ ಜಾಮೀನು ರಹಿತ ವಾರಂಟ್ ನೀಡಿದರೂ ತಮಗೆ ಸಂಬಂಧವಿಲ್ಲ ಎನ್ನುವಂತೆ ಸುಮ್ಮನಿದ್ದಾರೆ. ಕಾನೂನಿಗೆ ಮಾನ್ಯತೆ ಇಲ್ಲದಂತಾಗಿದೆ, ಕಾನೂನು ಧಿಕ್ಕರಿಸಿ ನಡೆಯುವ ಸಚಿವರು ಇನ್ಯಾವುದಕ್ಕೆ ಅಂಜುತ್ತಾರೆ ಎಂದು ದೇವೇಗೌಡ ಸರಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಬೇಲೂರಿನ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ದೇವೇಗೌಡ, ಮರು ಚುನಾವಣೆಯಲ್ಲಿ ಪಕ್ಷಕ್ಕೆ ಎರಡು ಸ್ಥಾನ ನಿಡುವ ಮೂಲಕ ಪ್ರಾದೇಶಿಕ ಪಕ್ಷದ ಅಗತ್ಯತೆಯನ್ನು ಮತದಾರರು ಸಾಬೀತು ಪಡಿಸಿದ್ದಾರೆಂದು ಈ ಸಂದರ್ಭದಲ್ಲಿ ಹೇಳಿಕೆ ನೀಡಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications