ಭದ್ರಾವತಿ ಶಿಕ್ಷಣ ಇಲಾಖೆಯಲ್ಲಿ ಸುಮಂಗಲಾ ರಾಜ್ಯಂ
ಭದ್ರಾವತಿ, ಆ. 26 : ಭದ್ರಾವತಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮನಸೋಯಿಚ್ಛೆ ನಿರ್ಧಾರಗಳಿಂದ ಸಾಕಷ್ಟು ಸುದ್ದಿಯಲ್ಲಿದೆ. ಸುಮಂಗಲಾ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಭದ್ರಾವತಿಗೆ ಕಾಲಿಟ್ಟ ಕ್ಷಣದಿಂದ ಶಿಕ್ಷಣ ಇಲಾಖೆಯಲ್ಲಿ ಸರ್ವಾಧಿಕಾರಿ ಧೋರಣೆ ಆರಂಭವಾಗಿದೆ. ಶಿಕ್ಷಣಾಧಿಕಾರಿಗಳಿಗೊಂದು ಕಛೇರಿ ಇದ್ದರೂ ಸಹ ಅಲ್ಲಿ ಕೆಲಸ ನಿರ್ವಹಿಸದ ಸುಮಂಗಲಾ ಖಾಸಗೀ ಶಾಲೆಗಳಲ್ಲಿ ಕುಳಿತು ತಮ್ಮ ಕಛೇರಿಯಿಂದ ಕಡತಗಳನ್ನು ತರಿಸಿಕೊಂಡು ಕೆಲಸ ಮಾಡುತ್ತಾರೆ. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಕೆಲ ಸಿಬ್ಬಂದಿಗಳು ಇತ್ತೀಚೆಗಷ್ಟೇ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿದೇರ್ಶಕರಿಗೆ ಮೌಖಿಕವಾಗಿ ದೂರು ನೀಡಿರುವ ಬಗ್ಗೆ ಸುದ್ದಿ ಹೊರಬಿದ್ದಿದೆ.
ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ಬೇಳೆಕಾಳು ಬೇಯಿಸಿಕೊಳ್ಳಲು ಶಿಕ್ಷಕರ ಸಂಘವನ್ನು ಇಬ್ಬಾಗ ಮಾಡಿ, ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ. ಈ ಮೂಲಕ ತಮ್ಮ ಕೆಲವು ಕೆಲಸಗಳನ್ನು ಮಾಡಿಸಿಕೊಳ್ಳುತ್ತಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಸುಮಂಗಲಾರವರ ಆದೇಶಗಳನ್ನು ಪಾಲಿಸದ ಕಛೇರಿ ಸಿಬ್ಬಂದಿಗಳು ಸುಮಂಗಲಾರವರಿಂದ ಇಲ್ಲಸಲ್ಲದ ಆರೋಪಗಳನ್ನು ಕೇಳುವಂತಾಗಿದೆ. ಕೆಲ ಸಿಬ್ಬಂದಿಗಳಂತೂ ಬೇರೆ ಕಡೆಗೆ ಸುಮಂಗಲಾರವರ ಕಾಟ ತಾಳಲಾರದೆ ವರ್ಗಾವಣೆ ಮಾಡಿಸಿಕೊಂಡು ಹೋದ ಪ್ರಕರಣಗಳೂ ಇಲ್ಲಿ ಕಾಣಸಿಗುತ್ತವೆ.
ಶಿಕ್ಷಕರ ಕುಂದುಕೊರತೆ ನೀಗಿಸಲೆಂದೇ ಇರುವ ಸಮಿತಿಯನ್ನೂ ಸಹ ಕ್ಷೇತ್ರ ಶಿಕ್ಷಣಾಧಿಕಾರಿ ಸುಮಂಗಲಾ ಸ್ವತಃ ಕೈಗೆತ್ತಿಕೊಂಡಿದ್ದು, ತಮಗೆ ಬೇಕಾದವರನ್ನು ಈ ಸಮಿತಿಯ ಪದಾಧಿಕಾರಿಗಳನ್ನಾಗಿ ಪರಿವರ್ತಿಸಿದ್ದಾರೆ. ತಮಗೆ ಬೇಕಾದಂತೆ ಕುಣಿಯುವವರನ್ನು ಸುಮಂಗಲಾ ಮಣೆ ಹಾಕುತ್ತಿದ್ದಾರೆ. ಸರ್ಕಾರ ಕ್ಷೇತ್ರ ಶಿಕ್ಷಣಾಧಿಕಾರಿಗೆಂದು ವಾಹನವೊಂದನ್ನು ನೀಡಿದ್ದರೂ ಸಹ, ಶಿಕ್ಷಕರ ಸಂಘದ ಪದಾಧಿಕಾರಿಗಳ ಖಾಸಗೀ ವಾಹನದಲ್ಲಿಯೇ ಇವರ ಓಡಾಟ ನಡೆದಿರುತ್ತದೆ. ಹೀಗೆ ನೂರೆಂಟು ಆರೋಪಗಳನ್ನು ಇವರ ಕಛೇರಿಯ ಕೆಲ ಸಿಬ್ಬಂದಿಗಳೇ ಮಾಡುತ್ತಾರೆ.
ಸುಮಂಗಲಾರವರು ಮೇಲಾಧಿಕಾರಿಗಳಿಂದ ಬಂದಂತಹ ಆದೇಶ ಪತ್ರಗಳನ್ನು ಅಥವಾ ಮಾಹಿತಿ ಪತ್ರಗಳನ್ನು ಸಂಬಂಧಪಟ್ಟ ತಮ್ಮ ಸಹಾಯಕರಿಗಾಗಲಿ, ಸಿಬ್ಬಂದಿ ವರ್ಗಕ್ಕಾಗಲಿ ತಿಳಿಸದೆ ತಮ್ಮ ಬಳಿಯೇ ಇಟ್ಟುಕೊಂಡು ಆ ನಂತರದಲ್ಲಿ ಮೇಲಾಧಿಕಾರಿಗಳಿಂದ ಒತ್ತಡ ಬಂದಾಗ ಆರೋಪವನ್ನೆಲ್ಲಾ ತಮ್ಮ ಸಹಾಯಕ ಸಿಬ್ಬಂದಿಗಳ ಮೇಲೆ ಹಾಕಿ, ಷೋಕಾಸ್ ನೋಟಿಸ್ ನೀಡುವಂತಹ ಪ್ರಸಂಗಗಳು ಅನೇಕ ನಡೆದಿವೆ ಎಂದು ಸಿಬ್ಬಂದಿಗಳು ತಮ್ಮ ಅಳಲು ತೋಡಿಕೊಳ್ಳುತ್ತಾರೆ. ಇತ್ತೀಚೆಗಷ್ಟೇ 2 ದಿನಗಳ ಕಾಲ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ ಜನಾಂಗದ ಸಭೆ ನಡೆಸಲಾಯಿತು. ಈ ಬಗ್ಗೆ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ವಿಚಾರಿಸಿದಾಗ, ಈ ಪದಾಧಿಕಾರಿಗಳ ವಿರುದ್ಧವೇ ಕ್ಷೇತ್ರ ಶಿಕ್ಷಣಾಧಿಕಾರಿ ಸುಮಂಗಲಾ ಮುನಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.
ಶಿಕ್ಷಕರ ದಿನಾಚರಣೆಯಂದು ನಿಯಮದಂತೆ ಶಿಕ್ಷಣ ಸಂಯೋಜಕರ ಮೂಲಕವೇ ಆಚರಿಸಬೇಕು. ಆದರಿಲ್ಲಿ ಸ್ವತಃ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಿಕ್ಷಕರ ದಿನಾಚರಣೆಯನ್ನು ಆಚರಿಸಲು ಮುಂದಾಗಿ, ಈ ದಿನಾಚರಣೆಯ ಹೆಸರಿನಲ್ಲಿ ಅಪಾರ ಹಣವನ್ನು ಅಕ್ರಮವಾಗಿ ಸಂಗ್ರಹಿಸಿದ್ದಾರೆ ಎಂಬ ಆರೋಪಗಳು ಸಹ ಇವರಲ್ಲಿವೆ. ಸ್ವಯಂ ನಿವೃತ್ತಿಯ ಸವಲತ್ತುಗಳನ್ನು ಜಾರಿಗೊಳಿಸಲು ಕ್ಷೇತ್ರ ಶಿಕ್ಷಣಾಧಿಕಾರಿ ಸುಮಂಗಲಾ ಹಣವನ್ನು ಒತ್ತಾಯದಿಂದ ಪಡೆಯುತ್ತಿರುವ ಬಗ್ಗೆಯೂ ಅವರದೇ ಕಛೇರಿಯ ಸಿಬ್ಬಂದಿಗಳು ಆಕ್ರೋಶ ವ್ಯಕ್ತಪಡಿಸುತ್ತಾರೆ.
ಇತ್ತೀಚೆಗಷ್ಟೇ ಸೇಂಟ್ ಮೇರೀಸ್ ಶಾಲೆಯಲ್ಲಿ ರಶೀದಿ ರಹಿತ ಹಣ ಸಂಗ್ರಹಣೆ ಬಗ್ಗೆ ಆಕ್ರೋಶಗೊಂಡ ಪೋಷಕರು ಧರಣಿ ಸತ್ಯಾಗ್ರಹಕ್ಕೆ ಮುಂದಾಗಿದ್ದರು. ಇದೇ ಸಂದರ್ಭವನ್ನು ಉಪಯೋಗಿಸಿಕೊಂಡ ಕ್ಷೇತ್ರ ಶಿಕ್ಷಣಾಧಿಕಾರಿ ಸುಮಂಗಲಾ ಆ ಶಾಲೆಯಿಂದ ಹಣ ಪಡೆದರೆಂಬ ಸುದ್ದಿಯೂ ಗುಪ್ತವಾಗಿ ಉಳಿದಿಲ್ಲ ಎನ್ನುತ್ತಾರೆ ಅವರದೇ ಕಛೇರಿಯ ಸಿಬ್ಬಂದಿಗಳು. ಅಲ್ಲದೇ, ಶಾಲಾ ಶಿಕ್ಷಕರ ಸಂಘದ ಕೆಲ ಪದಾಧಿಕಾರಿಗಳು ಶಾಲೆಗೆ ಸರಿಯಾಗಿ ಹಾಜರಾಗುವುದಿಲ್ಲ. ಸಂಘದ ಕೆಲಸದ ನೆಪದಲ್ಲಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಸುಮಂಗಲಾರವರ ಪ್ರಭಾವಳಿಯಲ್ಲಿ ಈ ಶಿಕ್ಷಕರು ತಾವು ಮಾಡಿದ್ದೆಲ್ಲಾ ದೇಶ ಸೇವೆ ಎಂದುಕೊಂಡಿದ್ದಾರೆ. ತಾಲ್ಲೂಕು ಪಂಚಾಯತಿ ವತಿಯಿಂದ ಈ ಬಗ್ಗೆ ಆದೇಶ ಬಂದಿದ್ದರೂ ಸಹ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕ್ರಮ ಕೈಗೊಳ್ಳದೆ ಈ ದೇಶೋದ್ಧಾರಕ ಶಿಕ್ಷಕರ ಅನ್ಯಾಯದ ಪರ ವಹಿಸಿ ನಿಂತಿದ್ದಾರೆಂದು ಆರೋಪಗಳು ಕೇಳಿಬರುತ್ತಿವೆ.
ಬಿಇಓ ಸುಮಂಗಲಾ ಹೊಸನಗರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾಗ ಅನೇಕ ಆರೋಪಗಳನ್ನು ಎದುರಿಸುತ್ತಿದ್ದರು. ಈ ತಪ್ಪು ಹೆಜ್ಜೆಗಳನ್ನು ತಿದ್ದಿಕೊಳ್ಳಲು ಶಿಕ್ಷಣ ಇಲಾಖೆ ಸುಮಂಗಲಾರವರಿಗೆ ಅವಕಾಶ ನೀಡಿತ್ತು. ಆದರೆ, ಭದ್ರಾವತಿಯಲ್ಲಿಯೇ ಮತ್ತದೇ ತಪ್ಪು ಹೆಜ್ಜೆಗಳನ್ನು ಸುಮಂಗಲಾ ಇಡತೊಡಗಿದ್ದಾರೆ.
ಭದ್ರಾವತಿ ಕ್ಷೇತ್ರ ಶಿಕ್ಷಣಾಧಿಕಾರಿ ಸುಮಂಗಲಾರವರಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಕೂಡಲೇ ಸಮಗ್ರ ತನಿಖೆ ಕೈಗೊಳ್ಳಬೇಕು. ಅಲ್ಲದೇ, ಭದ್ರಾವತಿ ಕ್ಷೇತ್ರದಿಂದ ಸುಮಂಗಲಾರವರನ್ನು ಕೂಡಲೇ ವರ್ಗಾಯಿಸಬೇಕು. ಅಲ್ಲಿಯವರೆಗೆ ಯಾವುದೇ ನೆಮ್ಮದಿ ಶಿಕ್ಷಣ ಇಲಾಖೆಗೆ ಇರುವುದಿಲ್ಲ ಎಂದು ಶಿಕ್ಷಕ ಸಮೂಹ ಅಭಿಪ್ರಾಯ ವ್ಯಕ್ತಪಡಿಸಿದೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications