ಸುಧಾಕರ್ ತಲೆದಂಡ : ವರಿಷ್ಠರ ನಿರ್ಧಾರಕ್ಕೆ ಬದ್ಧ

ಮೂರು ತಿಂಗಳಲ್ಲಿ ವಿಧಾನ ಪರಿಷತ್ ಗೆ ಸೋಮಣ್ಣ ಅವರನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಎದುರಾಗಿದ್ದು, ಅದಕ್ಕಾಗಿ ಬಿಜೆಪಿ ನಾಯಕರು ತಂತ್ರವೊಂದನ್ನು ರೂಪಿಸಿದ್ದಾರೆ. ಹಾಸನದ ವಿಧಾನ ಪರಿಷತ್ ಸದಸ್ಯ ಎಂ ಗುರುದೇವ್ ಅವರ ರಾಜೀನಾಮೆ ಪಡೆದು ಸೋಮಣ್ಣಗೆ ಅವಕಾಶ ಕಲ್ಪಿಸುವ ಮಾಸ್ಟರ್ ಪ್ಲಾನ್ ಹೆಣೆಯಲಾಗಿದೆ.
ಗುರುದೇವ್ ಅವರು ಈಗಾಗಲೇ ಜೆಡಿಎಸ್ ಜೊತೆ ಗುರುತಿಸಿಕೊಂಡಿದ್ದು, ಈ ಕಾರಣವನ್ನು ಮುಂದಿಟ್ಟುಕೊಂಡು ಅವರ ಸದಸ್ಯತ್ವ ರದ್ದುಗೊಳಿಸಿ ಸೋಮಣ್ಣ ಅವರನ್ನು ಆಯ್ಕೆ ಮಾಡಿಕೊಳ್ಳಲು ಪರ್ಯಾಯ ಮಾರ್ಗ ಹುಡುಕಿದೆ. ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಸೋಮಣ್ಣ ಹಿಡಿತವಿಟ್ಟುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರನ್ನು ಸಂಪುಟದಿಂದ ಕೈಬಿಟ್ಟರೆ ಪಕ್ಷಕ್ಕೆ ಲಾಭಕ್ಕಿಂತ ನಷ್ಟವೇ ಹೆಚ್ಚು ಎಂದು ಕೆಲವರು ಅಭಿಪ್ರಾಯ ಮಂಡಿಸಿದ್ದಾರೆ. ಒಂದು ವೇಳೆ ಸೋಮಣ್ಣ ಅವರನ್ನು ಸಂಪುಟದಿಂದ ಕೈಬಿಟ್ಟರೆ ಅವರನ್ನು ಹಿಂಬಾಲಿಸಿ ಬಂದಿರುವ ಪಾಲಿಕೆಯ ಮಾಜಿ ಸದಸ್ಯರು, ಮಾಜಿ ಉಪಮೇಯರ್ ಗಳು ಅಸಮಾಧಾನಗೊಳ್ಳಲಿದ್ದು, ಅವರ ಹಿತ ಕಾಪಾಡಲು ಸೋಮಣ್ಣ ಸಂಪುಟದಲ್ಲಿ ಉಳಿಯಲೇಬೇಕಿದೆ ಎನ್ನುವ ಅಭಿಪ್ರಾಯವೂ ಬಿಜೆಪಿ ಪಾಳೆಯದಲ್ಲಿ ಕೇಳಿ ಬಂದಿದೆ.
ಸದಾನಂದಗೌಡ ಸೂಚನೆ
ಕಾನೂನಿನ ಅನ್ವಯ ಅಪರಾಧಿಯೆಂದು ಪರಿಗಣಿಸಿದ ಮೇಲೆ ಸಚಿವ ಸ್ಥಾನದಲ್ಲಿ ಸುಧಾಕರ್ ಮುಂದುವರೆಯಲು ಸಾಧ್ಯವಿಲ್ಲ. ಅವರು ನಿರ್ದೋಷಿ ಎಂದು ತೀರ್ಮಾನ ಆಗುವವರೆಗೂ ಅಧಿಕಾರದಿಂದ ದೂರವಿರುವುದು ಅನಿವಾರ್ಯ ಎಂದು ಹೇಳುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಡಿ ವಿ ಸದಾನಂದಗೌಡ ಸಚಿವ ಸುಧಾಕರ್ ಅವರನ್ನು ಸಂಪುಟದಿಂದ ಕೈಬಿಡುವ ಸ್ಪಷ್ಟ ಸೂಚನೆ ನೀಡಿದ್ದಾರೆ.
ನಗರದಲ್ಲಿಂದು ಬಿಜೆಪಿ ಸದಸ್ಯತ್ವ ನೋಂದಣಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲಾಲ್ ಕೃಷ್ಣ ಅಡ್ವಾಣಿ ಪ್ರಕರಣವೊಂದರಲ್ಲಿ ನಿರ್ದೋಷಿ ಎಂದು ಸಾಬೀತಾಗುವವರೆಗೂ ಯಾವುದೇ ಅಧಿಕಾರದಲ್ಲಿ ಮುಂದುವರೆಯಲಿಲ್ಲ. ಅವರು ಹಾಕಿಕೊಟ್ಟ ಮಾರ್ಗದಲ್ಲೇ ನಾವು ಮುಂದುವರೆಯುವುದಾಗಿ ಗೌಡ ಹೇಳಿದರು.
ಒಮ್ಮತದ ಅಭಿಪ್ರಾಯಕ್ಕೆ ಬದ್ದ : ಸಿಎಂ
ಸಂಪುಟದ ಸದಸ್ಯರನ್ನು ಉಳಿಸಿಕೊಳ್ಳಲು ಅಥವಾ ಬಿಡಲು ತಾವು ಸ್ವತಂತ್ರರಾಗಿದ್ದರೂ ಸಾಮೂಹಿಕ ಅಭಿಪ್ರಾಯದ ಮೇಲೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಸಚಿವ ಸುಧಾಕರ್ ಅವರನ್ನು ಸಂಪುಟದಲ್ಲಿ ಉಳಿಸಿಕೊಳ್ಳಬೇಕೆ ಅಥವಾ ಬೇಡವೇ ಎಂಬುದರ ಬಗ್ಗೆ ರಾಷ್ಟ್ರೀಯ ನಾಯಕರೊಂದಿಗೆ ಹಾಗೂ ರಾಜ್ಯ ಪದಾಧಿಕಾರಿಗಳೊಂದಿಗೆ ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದರು.
ಸಚಿವ ಸಂಪುಟಕ್ಕೆ ತಾವು ಮುಖ್ಯಸ್ಥರಾಗಿದ್ದರೂ ವರಿಷ್ಠರ ನಿರ್ಧಾರವೂ ಮುಖ್ಯ ಸಾಮೂಹಿಕವಾಗಿ ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಮಣಿಯಬೇಕಾಗುತ್ತದೆ ಎಂದು ಹೇಳುವ ಮೂಲಕ ಸಚಿವ ಸುಧಾಕರ್ ಅವರನ್ನು ಮನೆಗೆ ಕಳುಹಿಸಲು ಮುಖ್ಯಮಂತ್ರಿಗಳು ಹಸಿರು ನಿಶಾನೆ ತೋರಿದಂತಾಗಿದೆ.
(ದಟ್ಸ್ ಕನ್ನಡ ವಾರ್ತೆ)
-
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral












Click it and Unblock the Notifications