ಸುಧಾಕರ್ ತಲೆದಂಡ : ವರಿಷ್ಠರ ನಿರ್ಧಾರಕ್ಕೆ ಬದ್ಧ

ಮೂರು ತಿಂಗಳಲ್ಲಿ ವಿಧಾನ ಪರಿಷತ್ ಗೆ ಸೋಮಣ್ಣ ಅವರನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಎದುರಾಗಿದ್ದು, ಅದಕ್ಕಾಗಿ ಬಿಜೆಪಿ ನಾಯಕರು ತಂತ್ರವೊಂದನ್ನು ರೂಪಿಸಿದ್ದಾರೆ. ಹಾಸನದ ವಿಧಾನ ಪರಿಷತ್ ಸದಸ್ಯ ಎಂ ಗುರುದೇವ್ ಅವರ ರಾಜೀನಾಮೆ ಪಡೆದು ಸೋಮಣ್ಣಗೆ ಅವಕಾಶ ಕಲ್ಪಿಸುವ ಮಾಸ್ಟರ್ ಪ್ಲಾನ್ ಹೆಣೆಯಲಾಗಿದೆ.
ಗುರುದೇವ್ ಅವರು ಈಗಾಗಲೇ ಜೆಡಿಎಸ್ ಜೊತೆ ಗುರುತಿಸಿಕೊಂಡಿದ್ದು, ಈ ಕಾರಣವನ್ನು ಮುಂದಿಟ್ಟುಕೊಂಡು ಅವರ ಸದಸ್ಯತ್ವ ರದ್ದುಗೊಳಿಸಿ ಸೋಮಣ್ಣ ಅವರನ್ನು ಆಯ್ಕೆ ಮಾಡಿಕೊಳ್ಳಲು ಪರ್ಯಾಯ ಮಾರ್ಗ ಹುಡುಕಿದೆ. ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಸೋಮಣ್ಣ ಹಿಡಿತವಿಟ್ಟುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರನ್ನು ಸಂಪುಟದಿಂದ ಕೈಬಿಟ್ಟರೆ ಪಕ್ಷಕ್ಕೆ ಲಾಭಕ್ಕಿಂತ ನಷ್ಟವೇ ಹೆಚ್ಚು ಎಂದು ಕೆಲವರು ಅಭಿಪ್ರಾಯ ಮಂಡಿಸಿದ್ದಾರೆ. ಒಂದು ವೇಳೆ ಸೋಮಣ್ಣ ಅವರನ್ನು ಸಂಪುಟದಿಂದ ಕೈಬಿಟ್ಟರೆ ಅವರನ್ನು ಹಿಂಬಾಲಿಸಿ ಬಂದಿರುವ ಪಾಲಿಕೆಯ ಮಾಜಿ ಸದಸ್ಯರು, ಮಾಜಿ ಉಪಮೇಯರ್ ಗಳು ಅಸಮಾಧಾನಗೊಳ್ಳಲಿದ್ದು, ಅವರ ಹಿತ ಕಾಪಾಡಲು ಸೋಮಣ್ಣ ಸಂಪುಟದಲ್ಲಿ ಉಳಿಯಲೇಬೇಕಿದೆ ಎನ್ನುವ ಅಭಿಪ್ರಾಯವೂ ಬಿಜೆಪಿ ಪಾಳೆಯದಲ್ಲಿ ಕೇಳಿ ಬಂದಿದೆ.
ಸದಾನಂದಗೌಡ ಸೂಚನೆ
ಕಾನೂನಿನ ಅನ್ವಯ ಅಪರಾಧಿಯೆಂದು ಪರಿಗಣಿಸಿದ ಮೇಲೆ ಸಚಿವ ಸ್ಥಾನದಲ್ಲಿ ಸುಧಾಕರ್ ಮುಂದುವರೆಯಲು ಸಾಧ್ಯವಿಲ್ಲ. ಅವರು ನಿರ್ದೋಷಿ ಎಂದು ತೀರ್ಮಾನ ಆಗುವವರೆಗೂ ಅಧಿಕಾರದಿಂದ ದೂರವಿರುವುದು ಅನಿವಾರ್ಯ ಎಂದು ಹೇಳುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಡಿ ವಿ ಸದಾನಂದಗೌಡ ಸಚಿವ ಸುಧಾಕರ್ ಅವರನ್ನು ಸಂಪುಟದಿಂದ ಕೈಬಿಡುವ ಸ್ಪಷ್ಟ ಸೂಚನೆ ನೀಡಿದ್ದಾರೆ.
ನಗರದಲ್ಲಿಂದು ಬಿಜೆಪಿ ಸದಸ್ಯತ್ವ ನೋಂದಣಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲಾಲ್ ಕೃಷ್ಣ ಅಡ್ವಾಣಿ ಪ್ರಕರಣವೊಂದರಲ್ಲಿ ನಿರ್ದೋಷಿ ಎಂದು ಸಾಬೀತಾಗುವವರೆಗೂ ಯಾವುದೇ ಅಧಿಕಾರದಲ್ಲಿ ಮುಂದುವರೆಯಲಿಲ್ಲ. ಅವರು ಹಾಕಿಕೊಟ್ಟ ಮಾರ್ಗದಲ್ಲೇ ನಾವು ಮುಂದುವರೆಯುವುದಾಗಿ ಗೌಡ ಹೇಳಿದರು.
ಒಮ್ಮತದ ಅಭಿಪ್ರಾಯಕ್ಕೆ ಬದ್ದ : ಸಿಎಂ
ಸಂಪುಟದ ಸದಸ್ಯರನ್ನು ಉಳಿಸಿಕೊಳ್ಳಲು ಅಥವಾ ಬಿಡಲು ತಾವು ಸ್ವತಂತ್ರರಾಗಿದ್ದರೂ ಸಾಮೂಹಿಕ ಅಭಿಪ್ರಾಯದ ಮೇಲೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಸಚಿವ ಸುಧಾಕರ್ ಅವರನ್ನು ಸಂಪುಟದಲ್ಲಿ ಉಳಿಸಿಕೊಳ್ಳಬೇಕೆ ಅಥವಾ ಬೇಡವೇ ಎಂಬುದರ ಬಗ್ಗೆ ರಾಷ್ಟ್ರೀಯ ನಾಯಕರೊಂದಿಗೆ ಹಾಗೂ ರಾಜ್ಯ ಪದಾಧಿಕಾರಿಗಳೊಂದಿಗೆ ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದರು.
ಸಚಿವ ಸಂಪುಟಕ್ಕೆ ತಾವು ಮುಖ್ಯಸ್ಥರಾಗಿದ್ದರೂ ವರಿಷ್ಠರ ನಿರ್ಧಾರವೂ ಮುಖ್ಯ ಸಾಮೂಹಿಕವಾಗಿ ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಮಣಿಯಬೇಕಾಗುತ್ತದೆ ಎಂದು ಹೇಳುವ ಮೂಲಕ ಸಚಿವ ಸುಧಾಕರ್ ಅವರನ್ನು ಮನೆಗೆ ಕಳುಹಿಸಲು ಮುಖ್ಯಮಂತ್ರಿಗಳು ಹಸಿರು ನಿಶಾನೆ ತೋರಿದಂತಾಗಿದೆ.
(ದಟ್ಸ್ ಕನ್ನಡ ವಾರ್ತೆ)
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications